ಮೈಸೂರು ನಗರ

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.

ರೇಣುಕಾದೇವಿ ಕರಗ ದೇವಸ್ಥಾನದ ಟ್ರಸ್ಟ್‌ ಆಶ್ರಯದಲ್ಲಿ ಏಪ್ರಿಲ್.‌21ರಿಂದಲೇ ಧಾರ್ಮಿಕ ವಿಧಿವಿಧಾನಗಳು ನಡೆದಿದ್ದು, ಇಂದು ರಾತ್ರಿ 8 ಗಂಟೆಗೆ ಕರಗ ಮೆರವಣಿಗೆಗೆ ಚಾಲನೆ ನೀಡಲಾಗಿದೆ.

ಶಕ್ತಿ ಸ್ವರೂಪಿಣಿಯ ಮೂರ್ತಿಗಳು ಮಲ್ಲಿಗೆಯ ಮಂಟಪದಲ್ಲಿ, ಜಗಮಗಿಸುವ ವಿದ್ಯುತ್‌ ದೀಪಾಲಂಕಾರಗಳ ನಡುವೆ ಸಂಚರಿಸುತ್ತಿವೆ. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗಿಯಾಗಿವೆ.

ದೇವಸ್ಥಾನದಿಂದ ಹೊರಟ ಕರಗವು ಪ್ರಮುಖ ರಸ್ತೆಗಳಲ್ಲಿ ಸಾಗಿ ನಾಳೆ ಬೆಳಿಗ್ಗೆ ಪುನಃ ದೇವಸ್ಥಾನ ತಲುಪಲಿದೆ.

 

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago