ಮೈಸೂರು: ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲ್ಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು ಎನ್ನುವ ಸೂಚನೆ ನೀಡಿದ್ದೆ. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಅಧಿಕಾರಿ ಮತ್ತು ಸಿಬ್ಬಂದಿ ಜನಸೇವೆಯ ಪ್ರಮಾಣ ಮಾಡಿ ಹುದ್ದೆ ಸ್ವೀಕರಿಸಿದ್ದೀರಿ. ಆದ್ದರಿಂದ ಜನರನ್ನು ಅಲೆದಾಡಿಸಬಾರದು. ನಾವು ಐದು ವರ್ಷಕ್ಕೊಮ್ಮೆ ಬರುವವರು, ಅಧಿಕಾರಿಗಳು ಶಾಶ್ವತವಾಗಿ ಇರುವವರು ಎನ್ನುವ ಭಾವನೆ ಬಿಟ್ಟು ಕೆಲಸ ಮಾಡಿ ಎಂದು ತಾಕೀತು ಮಾಡಿದರು.
ಇನ್ನು ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಅವರು, ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರನ್ನೇ ಹಿಡ್ಕೊಂಡು ಬರ್ತೀರಿ, ಇದು ಕೆಟ್ಟ ನಡವಳಿಕೆ, ನಾನು ಸಹಿಸಲ್ಲ ಎಂದು ಗರಂ ಆದರು.
ಇದನ್ನು ಓದಿ: ಕರ್ನಾಟಕದ ಜೈಲುಗಳು ಭಯೋತ್ಪಾದಕರಿಗೆ ಸ್ವರ್ಗವಿದ್ದಂತೆ: ಆರ್.ಅಶೋಕ್ ಆಕ್ರೋಶ
ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗಧಿತ ಅವಧಿಯ ಒಳಗೆ ಕೆಲಸಗಳು ಪೂರ್ಣಗೊಳ್ಳಬೇಕು ಎನ್ನುವ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು.
ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು.
ಮೈಸೂರಿನ ಜನತೆ, ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ತುಂಬಾ ಮಂದಿ ಬರುತ್ತಿದ್ದಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ನನಗೆ ಕಾಯುತ್ತಾ ಇರುತ್ತಾರೆ. ಇವರಲ್ಲಿ ವೈಯಕ್ತಿಕ ಸಮಸ್ಯೆಗಾಗಿ ಬರುವವರು ಕಡಿಮೆ. ಹೆಚ್ಚಾಗಿ ಕಂದಾಯ ಇಲಾಖೆಗಳ ಸಮಸ್ಯೆಗಳಿಗಾಗಿ ಬರುವವರೇ ಹೆಚ್ಚು. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಮೈಸೂರಿನ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ, ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುತ್ತಿದ್ದರೇ ಎಂದು ಪ್ರಶ್ನಿಸಿ, “ಜನರನ್ನು ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲʼ ಎಂದು ಎಚ್ಚರಿಸಿದರು.
ಇದನ್ನು ಓದಿ: ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ಬಿಡುಗಡೆ ಪ್ರಕರಣ: ನಟ ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ
ಹಾಸ್ಟೆಲ್ಗಳಲ್ಲಿ ಊಟದ ವ್ಯವಸ್ಥೆಯನ್ನು ಮೇಲಿಂದ ಮೇಲೆ ಪರಿಶೀಲನೆ ನಡೆಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.
ಹೊಸದಾಗಿ ಬಂದಿರುವ ಡಿಡಿಪಿಐ ಅವರಿಗೆ ನಿಮ್ಮ ಅವಧಿಯಲ್ಲಿ ಉತ್ತಮ ಫಲಿತಾಂಶ ಬರಬೇಕು. ನಾನು ಗಮನಿಸುತ್ತೇನೆ ಎನ್ನುವ ಸೂಚನೆ ನೀಡಿದರು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಫಲಿತಾಂಶ ಉತ್ತಮವಾಗಿರಬೇಕು, ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್ ಸಿದ್ಧಪಡಿಸಿ ಎಂದರು,
ಮೈಸೂರು ಶಿಕ್ಷಣಕ್ಕೆ ಮೊದಲಿನಿಂದಲೂ ಅತ್ಯಂತ ಪ್ರಾಮುಖ್ಯತೆ ನೀಡಿದ್ದ ಸಂಸ್ಥಾನ. ಇಲ್ಲೇ ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳರಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಗರಂ ಆದ ಸಿಎಂ ಬೇಗ ಪರಿಸ್ಥಿತಿ ಸುಧಾರಿಸಬೇಕು ಎನ್ನುವ ಸೂಚನೆ ನೀಡಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…