ಮೈಸೂರು ನಗರ

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ಧ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಕೀಲೆ ಕಾಜಲ್‌ ಪ್ರಸಾದ್‌ ಎಂಬುವವರೇ ವಂಚನೆಗೆ ಒಳಗಾದವರಾಗಿದ್ದಾರೆ. ಮದುವೆ ಆಗುವುದಾಗಿ ವಂಚಿಸಿದ ನವೀನ್‌ ಪೊನ್ನಯ್ಯ ಹಾಗೂ ಇವರ ತಂದೆ ಪಿ.ಕೆ.ಪೊನ್ನಯ್ಯ, ತಾಯಿ ಕುಮಾರಿ, ಪತ್ನಿ ಲಕ್ಷಿತ್‌ ಚಿಂಗಪ್ಪ, ದೊಡ್ಡಮ್ಮನ ಮಗಳು ಸುಮ ಹಾಗೂ ಬೆಳಿಯಪ್ಪ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಾಜಲ್‌ ಪ್ರಸಾದ್‌ ಅವರು ವಕೀಲ ನವೀನ್‌ ಪೊನ್ನಯ್ಯ ಜೊತೆ ಹಲವು ವರ್ಷಗಳಿಂದ ಪರಿಚಯ ಇದ್ದರು. ನವೀನ್‌ ಪೊನ್ನಯ್ಯ ತಮ್ಮ ಪತ್ನಿ ಜೊತೆ ಹೊಂದಾಣಿಕೆ ಇಲ್ಲವೆಂದು ಕಾರಣ ನೀಡಿ ಹೆಚ್ಚು ಒಡನಾಟ ಬೆಳೆಸಿಕೊಂಡಿದ್ದರು.

ನವೀನ್‌ ತಾಯಿ ಕಾಜಲ್‌ ಪ್ರಸಾದ್‌ ಮನೆಗೆ ಬಂದು ಮದುವೆ ಪ್ರಸ್ತಾಪ ಮಾಡಿ ಎಂಗೇಜ್‌ಮೆಂಟ್‌ ಮಾಡಿಕೊಂಡು ಡಿಸೆಂಬರ್.‌7ರಂದು ವಿವಾಹ ನಿಶ್ಚಯಿಸಿದ್ದರು. ಮದುವೆ ಫಿಕ್ಸ್‌ ಆದ ಹಿನ್ನೆಲೆಯಲ್ಲಿ ಇಬ್ಬರೂ ದೈಹಿಕ ಸಂಪರ್ಕ ಬೆಳೆಸಿದ್ದರು.

ಹೀಗಿರುವಾಗಲೇ ನವೀನ್‌ ಪೊನ್ನಯ್ಯ ನನಗೆ ಇನ್ನೂ ವಿಚ್ಚೇದನ ಆಗಿಲ್ಲ. ಪರಿಹಾರ ವಿಚಾರ ಕಂಡುಕೊಳ್ಳುವುದಾಗಿ ಹಾಗೂ ನಮ್ಮ ಯೋಜನೆಯಂತೆ ಮದುವೆ ನಡೆಯಲಿದೆ ಎಂದು ಮೆಸೇಜ್‌ ಮಾಡಿ ಸ್ವಿಚ್‌ ಆಫ್‌ ಮಾಡಿಕೊಂಡಿದ್ದರು.

ಈ ಬೆನ್ನಲ್ಲೇ ಗಾಬರಿಯಾದ ಕಾಜಲ್‌ ಪ್ರಸಾದ್‌ ಅವರು, ಇದೀಗ ಮದುವೆ ಆಮಂತ್ರಣ ಪತ್ರಿಕೆಗಳನ್ನು ವಿತರಿಸಲಾಗಿದೆ. ಆದರೆ ನವೀನ್‌ ಪೊನ್ನಯ್ಯ ಸಂಪರ್ಕಕ್ಕೆ ಸಿಗುತ್ತಿಲ್ಲ. ತಂದೆ ತಾಯಿ ಜೊತೆ ಮಾತನಾಡಿದಾಗ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ನನ್ನ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೀನ್‌ ಪೊನ್ನಯ್ಯ ಹಾಗೂ ಇತರರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಕಾಜಲ್‌ ಪ್ರಸಾದ್‌ ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

7 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

7 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

9 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

10 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

10 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

11 hours ago