ಮೈಸೂರು ನಗರ

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ಧ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಕೀಲೆ ಕಾಜಲ್‌ ಪ್ರಸಾದ್‌ ಎಂಬುವವರೇ ವಂಚನೆಗೆ ಒಳಗಾದವರಾಗಿದ್ದಾರೆ. ಮದುವೆ ಆಗುವುದಾಗಿ ವಂಚಿಸಿದ ನವೀನ್‌ ಪೊನ್ನಯ್ಯ ಹಾಗೂ ಇವರ ತಂದೆ ಪಿ.ಕೆ.ಪೊನ್ನಯ್ಯ, ತಾಯಿ ಕುಮಾರಿ, ಪತ್ನಿ ಲಕ್ಷಿತ್‌ ಚಿಂಗಪ್ಪ, ದೊಡ್ಡಮ್ಮನ ಮಗಳು ಸುಮ ಹಾಗೂ ಬೆಳಿಯಪ್ಪ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಾಜಲ್‌ ಪ್ರಸಾದ್‌ ಅವರು ವಕೀಲ ನವೀನ್‌ ಪೊನ್ನಯ್ಯ ಜೊತೆ ಹಲವು ವರ್ಷಗಳಿಂದ ಪರಿಚಯ ಇದ್ದರು. ನವೀನ್‌ ಪೊನ್ನಯ್ಯ ತಮ್ಮ ಪತ್ನಿ ಜೊತೆ ಹೊಂದಾಣಿಕೆ ಇಲ್ಲವೆಂದು ಕಾರಣ ನೀಡಿ ಹೆಚ್ಚು ಒಡನಾಟ ಬೆಳೆಸಿಕೊಂಡಿದ್ದರು.

ನವೀನ್‌ ತಾಯಿ ಕಾಜಲ್‌ ಪ್ರಸಾದ್‌ ಮನೆಗೆ ಬಂದು ಮದುವೆ ಪ್ರಸ್ತಾಪ ಮಾಡಿ ಎಂಗೇಜ್‌ಮೆಂಟ್‌ ಮಾಡಿಕೊಂಡು ಡಿಸೆಂಬರ್.‌7ರಂದು ವಿವಾಹ ನಿಶ್ಚಯಿಸಿದ್ದರು. ಮದುವೆ ಫಿಕ್ಸ್‌ ಆದ ಹಿನ್ನೆಲೆಯಲ್ಲಿ ಇಬ್ಬರೂ ದೈಹಿಕ ಸಂಪರ್ಕ ಬೆಳೆಸಿದ್ದರು.

ಹೀಗಿರುವಾಗಲೇ ನವೀನ್‌ ಪೊನ್ನಯ್ಯ ನನಗೆ ಇನ್ನೂ ವಿಚ್ಚೇದನ ಆಗಿಲ್ಲ. ಪರಿಹಾರ ವಿಚಾರ ಕಂಡುಕೊಳ್ಳುವುದಾಗಿ ಹಾಗೂ ನಮ್ಮ ಯೋಜನೆಯಂತೆ ಮದುವೆ ನಡೆಯಲಿದೆ ಎಂದು ಮೆಸೇಜ್‌ ಮಾಡಿ ಸ್ವಿಚ್‌ ಆಫ್‌ ಮಾಡಿಕೊಂಡಿದ್ದರು.

ಈ ಬೆನ್ನಲ್ಲೇ ಗಾಬರಿಯಾದ ಕಾಜಲ್‌ ಪ್ರಸಾದ್‌ ಅವರು, ಇದೀಗ ಮದುವೆ ಆಮಂತ್ರಣ ಪತ್ರಿಕೆಗಳನ್ನು ವಿತರಿಸಲಾಗಿದೆ. ಆದರೆ ನವೀನ್‌ ಪೊನ್ನಯ್ಯ ಸಂಪರ್ಕಕ್ಕೆ ಸಿಗುತ್ತಿಲ್ಲ. ತಂದೆ ತಾಯಿ ಜೊತೆ ಮಾತನಾಡಿದಾಗ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ನನ್ನ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೀನ್‌ ಪೊನ್ನಯ್ಯ ಹಾಗೂ ಇತರರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಕಾಜಲ್‌ ಪ್ರಸಾದ್‌ ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

7 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

7 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

7 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

7 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

11 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

12 hours ago