ಮೈಸೂರು : ನಗರದ ಹೃದಯ ಭಾಗವಾದ ಸಿದ್ದಾರ್ಥ ನಗರದ ಸುರೇಶ್ ಎಂಬುವವರ ಮನೆಗೆ ಏಕಾಏಕಿ ನುಗ್ಗಿದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಿಂದ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಸುರೇಶ್ ಎಂಬುವವರ ಮನೆಗೆ ಏಕಾಏಕಿ ಚಿರತೆ ಪ್ರವೇಶಿಸಿದೆ, ಆ ವೇಳೆ ಮನೆಯಲ್ಲಿ ಸುರೇಶ್ ಅವರ ಪತ್ನಿ ಸುಜಾತಾ ಮತ್ತು ತಾಯಿ ಶೈಲಜಾ ಇದ್ದರು. ಚಿರತೆ ಏಕಾಏಕಿ ಮನೆಗೆ ನುಗ್ಗಿ ವೃದ್ಧೆ ಶೈಲಜಾ ಮಲಗಿದ್ದ ಕೊಠಡಿಯೊಳಗೆ ಪ್ರವೇಶಿಸಿತು. ಸಮಯಪ್ರಜ್ಞೆಯಿಂದ ಸುಜಾತಾ ಅವರು ತಮ್ಮ ಅತ್ತೆ ಶೈಲಜಾ ಅವರನ್ನು ಧೈರ್ಯದಿಂದ ರಕ್ಷಿಸಿದರು.
ಮನೆಯಲ್ಲಿ ಚಿರತೆ ಅಡಗಿರುವುದು ಗೊತ್ತಾದ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ತ್ವರಿತವಾಗಿ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಬಂಧಿಸಲಾಗಿದೆ.
ಸುಜಾತಾ ಅವರ ಸಮಯಪ್ರಜ್ಞೆಯಿಂದ ಅಜ್ಜಿ ಶೈಲಜಾ ಅವರ ಜೀವ ಉಳಿಸಿದ್ದು, ಎಲ್ಲರಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…