ಮೈಸೂರು: ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿಯಾಗಿರುವ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಯಾವುದೇ ಅಧಿಕಾರಿಗಳು ರಾತ್ರಿ ಸಮಯದಲ್ಲಿ ದಾಖಲೆಗಳನ್ನು ತಂದು ಕೊಡಿ ಎಂದು ಕೇಳುವುದಿಲ್ಲ. ಅವರು ರಾತ್ರಿ ವೇಳೆಯಲ್ಲಿಯೇ ಯಾಕೆ ದಿಢೀರ್ನೇ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಪ್ರಶ್ನಿಸಿದರು.
ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ಪ್ರಾಮಾಣಿಕವಾದ ತನಿಖೆ ನಡೆಸಲು ಸಾಧ್ಯವಿಲ್ಲ. ಏಕೆಂದರೆ ಎ1 ಆರೋಪಿ ಸಿದ್ದರಾಮಯ್ಯ ಅವರೇ ರಾಜ್ಯ ಸರ್ಕಾರ ನಡೆಸುತ್ತಿದ್ದಾರೆ. ಈ ಮಧ್ಯೆ ಎ3 ಆರೋಪಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದಾರೆ. ಹೀಗಾಗಿ ಹಿರಿಯ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡುತ್ತೇನೆ ಎಂದು ಕಿಡಿಕಾರಿದರು.
ಒಂದು ರಾಜ್ಯದ ಮುಖ್ಯಮಂತ್ರಿಯನ್ನು ಜಿಲ್ಲಾಮಟ್ಟದ ಅಧಿಕಾರಿ ಎಂದಾದರೂ ತನಿಖೆ ನಡೆಸಲು ಸಾಧ್ಯನಾ ಎಂದು ಪ್ರಶ್ನಿಸಿದ ಅವರು, ಈ ಕಾರಣಕ್ಕಾಗಿಯೇ ನವೆಂಬರ್.26ರಂದು ಮೊದಲು ಹೈಕೋರ್ಟ್ ಗಮನಕ್ಕೂ ತರಲಾಗುವುದು. ಬಳಿಕ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆದೇಶಿಸಬೇಕು. ಆಗ ಮಾತ್ರ ಸಿಬಿಐನವರು ಯಾರ ಮುಲಾಜಿಲ್ಲದೆ ತನಿಖೆ ನಡೆಸುತ್ತಾರೆ. ಅಲ್ಲದೇ ಈ ಮುಡಾ ಪ್ರಕರಣದ ಬಗ್ಗೆ ಅಧಿವೇಶನದ ಮೊದಲ ದಿನವೇ ಸದನದಲ್ಲಿ ಚರ್ಚೆ ನಡೆದರೂ ಅಚ್ಚರಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…