ರಾತ್ರೋರಾತ್ರಿ ಸಿಎಂ ಸಿದ್ದರಾಮಯ್ಯ ಬಾಮೈದ ಲೋಕಾ ಕಚೇರಿಗೆ ಭೇಟಿ: ಶಾಸಕ ಶ್ರೀವತ್ಸ ಆಕ್ರೋಶ ಪ್ರತಿಕ್ರಿಯೆ

ಮೈಸೂರು: ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್‌.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿಯಾಗಿರುವ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಯಾವುದೇ ಅಧಿಕಾರಿಗಳು ರಾತ್ರಿ ಸಮಯದಲ್ಲಿ ದಾಖಲೆಗಳನ್ನು ತಂದು ಕೊಡಿ ಎಂದು ಕೇಳುವುದಿಲ್ಲ. ಅವರು ರಾತ್ರಿ ವೇಳೆಯಲ್ಲಿಯೇ ಯಾಕೆ ದಿಢೀರ್‌ನೇ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಪ್ರಶ್ನಿಸಿದರು.

ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ಪ್ರಾಮಾಣಿಕವಾದ ತನಿಖೆ ನಡೆಸಲು ಸಾಧ್ಯವಿಲ್ಲ. ಏಕೆಂದರೆ ಎ1 ಆರೋಪಿ ಸಿದ್ದರಾಮಯ್ಯ ಅವರೇ ರಾಜ್ಯ ಸರ್ಕಾರ ನಡೆಸುತ್ತಿದ್ದಾರೆ. ಈ ಮಧ್ಯೆ ಎ3 ಆರೋಪಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದಾರೆ. ಹೀಗಾಗಿ ಹಿರಿಯ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡುತ್ತೇನೆ ಎಂದು ಕಿಡಿಕಾರಿದರು.

ಒಂದು ರಾಜ್ಯದ ಮುಖ್ಯಮಂತ್ರಿಯನ್ನು ಜಿಲ್ಲಾಮಟ್ಟದ ಅಧಿಕಾರಿ ಎಂದಾದರೂ ತನಿಖೆ ನಡೆಸಲು ಸಾಧ್ಯನಾ ಎಂದು ಪ್ರಶ್ನಿಸಿದ ಅವರು, ಈ ಕಾರಣಕ್ಕಾಗಿಯೇ ನವೆಂಬರ್‌.26ರಂದು ಮೊದಲು ಹೈಕೋರ್ಟ್‌ ಗಮನಕ್ಕೂ ತರಲಾಗುವುದು. ಬಳಿಕ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆದೇಶಿಸಬೇಕು. ಆಗ ಮಾತ್ರ ಸಿಬಿಐನವರು ಯಾರ ಮುಲಾಜಿಲ್ಲದೆ ತನಿಖೆ ನಡೆಸುತ್ತಾರೆ. ಅಲ್ಲದೇ ಈ ಮುಡಾ ಪ್ರಕರಣದ ಬಗ್ಗೆ ಅಧಿವೇಶನದ ಮೊದಲ ದಿನವೇ ಸದನದಲ್ಲಿ ಚರ್ಚೆ ನಡೆದರೂ ಅಚ್ಚರಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರ್ಚನ ಎಸ್‌ ಎಸ್

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

9 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

9 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

11 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

11 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

11 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

12 hours ago