Flame border background, black realistic fire image
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ ಘಟನೆ ನಗರದಲ್ಲಿ ನಡೆದಿದೆ.
ನಗರದ ಗೋಕುಲಂ ನಿವಾಸಿ ಮರಿಶೆಟ್ಟಿ(75) ಎಂಬವರೇ ಬೆಂಕಿಗೆ ಸಿಲುಕಿ ಮೃತಪಟ್ಟವರು. ಅವರು ಸುಮಾರು 45 ವರ್ಷಗಳಿಂದ ನಗರದ ಗೋಕುಲಂನಲ್ಲಿ ಇರುವ ಗೋಕುಲ್ ಚಿತ್ರಮಂದಿರದಲ್ಲಿ ವಾಚ್ಮನ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರ ಬೆಳಿಗ್ಗೆ ಆವರಣವನ್ನು ಸ್ವಚ್ಛಗೊಳಿಸುವ ವೇಳೆ ಅಲ್ಲಿದ್ದ ಕಸಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ವೇಗವಾಗಿ ಹಬ್ಬಿದ ಪರಿಣಾಮ ಮರಿಶೆಟ್ಟಿ ಹೊರಬರಲು ಸಾಧ್ಯವಾಗದೇ ಬೆಂಕಿಯಲ್ಲೇ ಸಿಲುಕಿ ಸಜೀವ ದಹನಗೊಂಡಿದ್ದಾರೆ.
ಕೆಲಸ ಮುಗಿಸಿ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಬೆಂಕಿಯನ್ನು ಆರಿಸಿದ್ದಾರೆ. ಈ ಸಂಬಂದ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ 15 ವರ್ಷಗಳ ಹಿಂದೆ ಗೋಕುಲ್ ಚಿತ್ರಮಂದಿರ ಮುಚ್ಚಲ್ಪಟ್ಟಿತ್ತು. ಇದೀಗ ಅಲ್ಲಿನ ಒಂದುವರೆ ಎಕರೆ ಜಾಗ ಖಾಲಿ ಬಿದ್ದಿದೆ. ಅಲ್ಲಿ ಮರಿಶೆಟ್ಟಿ ಅವರು ನೀರು ಕಾಯಿಸಲೆಂದು ಸೌದೆಯನ್ನು ಶೇಖರಿಸಿ ಇಟ್ಟಿದ್ದರು.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿತ್ರಮಂದಿರದ ಆವರಣಕ್ಕೆ ತೆರಳಿದ್ದ ವೇಳೆ ಬೆಂಕಿ ತರಗೆಲೆಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅದನ್ನು ಆರಿಸಲು ಹೋಗಿ ಆಯತಪ್ಪಿ ಬಿದ್ದ ಅವರಿಗೆ ಬಹುಶಃ ಏದ್ದು ನಿಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಅವರಿಗೂ ಬೆಂಕಿ ತಗುಲಿರಬಹುದು ಎಂದು ಪೊಲಿಸರು ಅಂದಾಜಿಸಿದ್ದಾರೆ.
ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಈ ಬಗ್ಗೆ…
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…