Flame border background, black realistic fire image
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ ಘಟನೆ ನಗರದಲ್ಲಿ ನಡೆದಿದೆ.
ನಗರದ ಗೋಕುಲಂ ನಿವಾಸಿ ಮರಿಶೆಟ್ಟಿ(75) ಎಂಬವರೇ ಬೆಂಕಿಗೆ ಸಿಲುಕಿ ಮೃತಪಟ್ಟವರು. ಅವರು ಸುಮಾರು 45 ವರ್ಷಗಳಿಂದ ನಗರದ ಗೋಕುಲಂನಲ್ಲಿ ಇರುವ ಗೋಕುಲ್ ಚಿತ್ರಮಂದಿರದಲ್ಲಿ ವಾಚ್ಮನ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರ ಬೆಳಿಗ್ಗೆ ಆವರಣವನ್ನು ಸ್ವಚ್ಛಗೊಳಿಸುವ ವೇಳೆ ಅಲ್ಲಿದ್ದ ಕಸಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ವೇಗವಾಗಿ ಹಬ್ಬಿದ ಪರಿಣಾಮ ಮರಿಶೆಟ್ಟಿ ಹೊರಬರಲು ಸಾಧ್ಯವಾಗದೇ ಬೆಂಕಿಯಲ್ಲೇ ಸಿಲುಕಿ ಸಜೀವ ದಹನಗೊಂಡಿದ್ದಾರೆ.
ಕೆಲಸ ಮುಗಿಸಿ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಬೆಂಕಿಯನ್ನು ಆರಿಸಿದ್ದಾರೆ. ಈ ಸಂಬಂದ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ 15 ವರ್ಷಗಳ ಹಿಂದೆ ಗೋಕುಲ್ ಚಿತ್ರಮಂದಿರ ಮುಚ್ಚಲ್ಪಟ್ಟಿತ್ತು. ಇದೀಗ ಅಲ್ಲಿನ ಒಂದುವರೆ ಎಕರೆ ಜಾಗ ಖಾಲಿ ಬಿದ್ದಿದೆ. ಅಲ್ಲಿ ಮರಿಶೆಟ್ಟಿ ಅವರು ನೀರು ಕಾಯಿಸಲೆಂದು ಸೌದೆಯನ್ನು ಶೇಖರಿಸಿ ಇಟ್ಟಿದ್ದರು.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿತ್ರಮಂದಿರದ ಆವರಣಕ್ಕೆ ತೆರಳಿದ್ದ ವೇಳೆ ಬೆಂಕಿ ತರಗೆಲೆಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅದನ್ನು ಆರಿಸಲು ಹೋಗಿ ಆಯತಪ್ಪಿ ಬಿದ್ದ ಅವರಿಗೆ ಬಹುಶಃ ಏದ್ದು ನಿಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಅವರಿಗೂ ಬೆಂಕಿ ತಗುಲಿರಬಹುದು ಎಂದು ಪೊಲಿಸರು ಅಂದಾಜಿಸಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…