ಮೈಸೂರು ನಗರ

ಮೈಸೂರು | ಸಾಮೂಹಿಕ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ

ಮೈಸೂರು : ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್‌ ಬಾಕಿ ವಸೂಲಾತಿಗಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದಿಂದ ಹಮ್ಮಿಕೊಂಡಿರುವ ಸಾಮೂಹಿಕ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ ನ.14 ರಿಂದ ಆರಂಭವಾಗಲಿದೆ.

ಕೆಲವು ಗ್ರಾಹಕರು, ಗ್ರಾಮ ಪಂಚಾಯತಿ ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳನ್ನು ಒಳಗೊಂಡಂತೆ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿರುದ್ಧ ಕ್ರಮವಹಿಸಲು ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್‌ ನಿರ್ಧರಿಸಿದೆ.

ಇದನ್ನು ಓದಿ: ಮೈಸೂರು : ಸೆಸ್ಕ್‌ನಿಂದ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ

ಸೆಸ್ಕ್‌ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ನ.14, 2025ರಿಂದ ಸಾಮೂಹಿಕ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ ನಡೆಸಲಾಗುತ್ತಿದೆ. ಈ ಅಭಿಯಾನದಲ್ಲಿ ಎಲ್ಲ ಪ್ರವರ್ಗದ ವಿದ್ಯುತ್‌ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ನಿಗದಿತ ಅವಧಿಯೊಳಗೆ ವಿದ್ಯುತ್‌ ಶುಲ್ಕ ಬಾಕಿ ಪಾವತಿಸದ ಮೀಟರ್‌/ಮಾಪಕಗಳ ವಿದ್ಯುತ್‌ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೆ  ಕಡಿತಗೊಳಿಸಲಾಗುವುದು.

ಆದ್ದರಿಂದ ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಮೀಟರ್‌/ಮಾಪಕಗಳ ವಿದ್ಯುತ್‌ ಶುಲ್ಕವನ್ನು ನ.14, 2025 ರೊಳಗೆ ಸೆಸ್ಕ್‌ ಅಧಿಕೃತ ನಗದು ಕೌಂಟರ್ ಅಥವಾ ಆನ್‌ ಲೈನ್‌ ಮೂಲಕ ಕೂಡಲೇ ಪಾವತಿಸುವಂತೆ ಕೋರಲಾಗಿದೆ. ಆ ಮೂಲಕ ವಿದ್ಯುತ್ ಕಡಿತಗೊಳಿಸುವ ಕ್ರಮಕ್ಕೆ ಆಸ್ಪದ ನೀಡದಂತೆ ಗ್ರಾಹಕರು ಸಹಕರಿಸಬೇಕೆಂದು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

15 mins ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

57 mins ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

1 hour ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

1 hour ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

2 hours ago

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

3 hours ago