ಮೈಸೂರು ನಗರ

ಮೈಸೂರು | ಸಾಮೂಹಿಕ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ

ಮೈಸೂರು : ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್‌ ಬಾಕಿ ವಸೂಲಾತಿಗಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದಿಂದ ಹಮ್ಮಿಕೊಂಡಿರುವ ಸಾಮೂಹಿಕ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ ನ.14 ರಿಂದ ಆರಂಭವಾಗಲಿದೆ.

ಕೆಲವು ಗ್ರಾಹಕರು, ಗ್ರಾಮ ಪಂಚಾಯತಿ ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳನ್ನು ಒಳಗೊಂಡಂತೆ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿರುದ್ಧ ಕ್ರಮವಹಿಸಲು ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್‌ ನಿರ್ಧರಿಸಿದೆ.

ಇದನ್ನು ಓದಿ: ಮೈಸೂರು : ಸೆಸ್ಕ್‌ನಿಂದ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ

ಸೆಸ್ಕ್‌ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ನ.14, 2025ರಿಂದ ಸಾಮೂಹಿಕ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ ನಡೆಸಲಾಗುತ್ತಿದೆ. ಈ ಅಭಿಯಾನದಲ್ಲಿ ಎಲ್ಲ ಪ್ರವರ್ಗದ ವಿದ್ಯುತ್‌ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ನಿಗದಿತ ಅವಧಿಯೊಳಗೆ ವಿದ್ಯುತ್‌ ಶುಲ್ಕ ಬಾಕಿ ಪಾವತಿಸದ ಮೀಟರ್‌/ಮಾಪಕಗಳ ವಿದ್ಯುತ್‌ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೆ  ಕಡಿತಗೊಳಿಸಲಾಗುವುದು.

ಆದ್ದರಿಂದ ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಮೀಟರ್‌/ಮಾಪಕಗಳ ವಿದ್ಯುತ್‌ ಶುಲ್ಕವನ್ನು ನ.14, 2025 ರೊಳಗೆ ಸೆಸ್ಕ್‌ ಅಧಿಕೃತ ನಗದು ಕೌಂಟರ್ ಅಥವಾ ಆನ್‌ ಲೈನ್‌ ಮೂಲಕ ಕೂಡಲೇ ಪಾವತಿಸುವಂತೆ ಕೋರಲಾಗಿದೆ. ಆ ಮೂಲಕ ವಿದ್ಯುತ್ ಕಡಿತಗೊಳಿಸುವ ಕ್ರಮಕ್ಕೆ ಆಸ್ಪದ ನೀಡದಂತೆ ಗ್ರಾಹಕರು ಸಹಕರಿಸಬೇಕೆಂದು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

3 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

3 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

4 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

5 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

5 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

5 hours ago