ಮೈಸೂರು : ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್ ಬಾಕಿ ವಸೂಲಾತಿಗಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಹಮ್ಮಿಕೊಂಡಿರುವ ಸಾಮೂಹಿಕ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ನ.14 ರಿಂದ ಆರಂಭವಾಗಲಿದೆ.
ಕೆಲವು ಗ್ರಾಹಕರು, ಗ್ರಾಮ ಪಂಚಾಯತಿ ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳನ್ನು ಒಳಗೊಂಡಂತೆ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿರುದ್ಧ ಕ್ರಮವಹಿಸಲು ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್ ನಿರ್ಧರಿಸಿದೆ.
ಇದನ್ನು ಓದಿ: ಮೈಸೂರು : ಸೆಸ್ಕ್ನಿಂದ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ
ಸೆಸ್ಕ್ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ನ.14, 2025ರಿಂದ ಸಾಮೂಹಿಕ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ನಡೆಸಲಾಗುತ್ತಿದೆ. ಈ ಅಭಿಯಾನದಲ್ಲಿ ಎಲ್ಲ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ನಿಗದಿತ ಅವಧಿಯೊಳಗೆ ವಿದ್ಯುತ್ ಶುಲ್ಕ ಬಾಕಿ ಪಾವತಿಸದ ಮೀಟರ್/ಮಾಪಕಗಳ ವಿದ್ಯುತ್ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೆ ಕಡಿತಗೊಳಿಸಲಾಗುವುದು.
ಆದ್ದರಿಂದ ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಮೀಟರ್/ಮಾಪಕಗಳ ವಿದ್ಯುತ್ ಶುಲ್ಕವನ್ನು ನ.14, 2025 ರೊಳಗೆ ಸೆಸ್ಕ್ ಅಧಿಕೃತ ನಗದು ಕೌಂಟರ್ ಅಥವಾ ಆನ್ ಲೈನ್ ಮೂಲಕ ಕೂಡಲೇ ಪಾವತಿಸುವಂತೆ ಕೋರಲಾಗಿದೆ. ಆ ಮೂಲಕ ವಿದ್ಯುತ್ ಕಡಿತಗೊಳಿಸುವ ಕ್ರಮಕ್ಕೆ ಆಸ್ಪದ ನೀಡದಂತೆ ಗ್ರಾಹಕರು ಸಹಕರಿಸಬೇಕೆಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…