ಮೈಸೂರು : ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್ ಬಾಕಿ ವಸೂಲಾತಿಗಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಹಮ್ಮಿಕೊಂಡಿರುವ ಸಾಮೂಹಿಕ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ನ.14 ರಿಂದ ಆರಂಭವಾಗಲಿದೆ.
ಕೆಲವು ಗ್ರಾಹಕರು, ಗ್ರಾಮ ಪಂಚಾಯತಿ ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳನ್ನು ಒಳಗೊಂಡಂತೆ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿರುದ್ಧ ಕ್ರಮವಹಿಸಲು ವಿದ್ಯುತ್ ಬಾಕಿ ವಸೂಲಿಗೆ ಸೆಸ್ಕ್ ನಿರ್ಧರಿಸಿದೆ.
ಇದನ್ನು ಓದಿ: ಮೈಸೂರು : ಸೆಸ್ಕ್ನಿಂದ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ
ಸೆಸ್ಕ್ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ನ.14, 2025ರಿಂದ ಸಾಮೂಹಿಕ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ ನಡೆಸಲಾಗುತ್ತಿದೆ. ಈ ಅಭಿಯಾನದಲ್ಲಿ ಎಲ್ಲ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ನಿಗದಿತ ಅವಧಿಯೊಳಗೆ ವಿದ್ಯುತ್ ಶುಲ್ಕ ಬಾಕಿ ಪಾವತಿಸದ ಮೀಟರ್/ಮಾಪಕಗಳ ವಿದ್ಯುತ್ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೆ ಕಡಿತಗೊಳಿಸಲಾಗುವುದು.
ಆದ್ದರಿಂದ ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಮೀಟರ್/ಮಾಪಕಗಳ ವಿದ್ಯುತ್ ಶುಲ್ಕವನ್ನು ನ.14, 2025 ರೊಳಗೆ ಸೆಸ್ಕ್ ಅಧಿಕೃತ ನಗದು ಕೌಂಟರ್ ಅಥವಾ ಆನ್ ಲೈನ್ ಮೂಲಕ ಕೂಡಲೇ ಪಾವತಿಸುವಂತೆ ಕೋರಲಾಗಿದೆ. ಆ ಮೂಲಕ ವಿದ್ಯುತ್ ಕಡಿತಗೊಳಿಸುವ ಕ್ರಮಕ್ಕೆ ಆಸ್ಪದ ನೀಡದಂತೆ ಗ್ರಾಹಕರು ಸಹಕರಿಸಬೇಕೆಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…