ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು 10.20 ಕೋಟಿ ಉಳಿತಾಯ ಬಜೆಟ್ ಆಗಿದೆ.
ಪ್ರಾದೇಶಿಕ ಆಯುಕ್ತ ಹಾಗೂ ಆಡಳಿತಾಧಿಕಾರಿ ನಿತೇಶ್ ಪಾಟೀಲ ಅವರು ವಿಶೇಷ ಸಭೆಯಲ್ಲಿ ಬಜೆಟ್ ಮಂಡಿಸಿದರು. ಒಟ್ಟು ಖರ್ಚು 1,300.92 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಪಾಲಿಕೆಯಲ್ಲಿ ಜನಪ್ರತಿನಿಧಿಗಳಿಲ್ಲದ ಕಾರಣ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು. ಯಾವುದೇ ಚರ್ಚೆ ನಡೆಯಲಿಲ್ಲ. ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್ ಅವರು ಇದ್ದರು.
ಆದಾಯ ಮೂಲಗಳು:
ಆಸ್ತಿ ತೆರಿಗೆ, ನೀರಿನ ತೆರಿಗೆ, ಒಳಚರಂಡಿ ಕರ, ವಿವಿಧ ಶುಲ್ಕಗಳು, ಬಾಡಿಗೆ, ಜಾಹೀರಾತು ಶುಲ್ಕ ಮತ್ತು ಕೇಂದ್ರ-ರಾಜ್ಯ ಅನುದಾನಗಳು.
ಏಲ್ಲೆಲ್ಲಿಗೆ ಏನೇನು?
1. ಕುಂಬಾರಕೊಪ್ಪಲಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 50ಲಕ್ಷ ರೂಪಾಯಿಗಳು ಅನುದಾನ
2. ಟೌನ್ ಹಾಲ್ ಅಭಿವೃದ್ಧಿಗೆ 30 ಲಕ್ಷ ರೂಪಾಯಿಗಳು
3.ಕೃಷ್ಣರಾಜ, ಚಾಮರಾಜ, ನರಸಿಂಹ ರಾಜ ಕ್ಷೇತ್ರದಲ್ಲಿ ಈಜು ಕೊಳ ನಿರ್ಮಾಣ
4. ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ಅನುದಾನ
5. ಜೆಪಿ ನಗರದ ಪುಟ್ಟರಾಜ ಗವಾಯಿ ಕ್ರೀಡಾಂಗಣ ಅಭಿವೃದ್ಧಿಗೆ 1.10 ಕೋಟಿ ಮೀಸಲು
6. ಚಾಮರಾಜ, ಕೃಷ್ಣರಾಜ, ನರಸಿಂಹ ರಾಜ ಕ್ಷೇತ್ರದ ವೃತ್ತಗಳ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಅನುದಾನ
7. ಪಾಲಿಕೆ ವ್ಯಾಪ್ತಿಯ ಚರಂಡಿ ರಸ್ತೆಗಳ ಅಭಿವೃದ್ಧಿಗೆ 30 ಕೋಟಿ
8. ಪ್ರವಾಸಿ ತಾಣ ಜನನಿಬಿಡ ಪ್ರದೇಶಗಳಲ್ಲಿ ಪಾರಂಪರಿಕ ಶೈಲಿಯ ಶೌಚಾಲಯ ನಿರ್ಮಾಣ
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…