ಮೈಸೂರು ನಗರ

ಮೈಸೂರು ಮಹಾನಗರ ಪಾಲಿಕೆ : 10.20ಕೋಟಿ ಉಳಿತಾಯ ಬಜೆಟ್‌ಗೆ ಅನುಮೋದನೆ

ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್‌ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು 10.20 ಕೋಟಿ ಉಳಿತಾಯ ಬಜೆಟ್ ಆಗಿದೆ.

ಪ್ರಾದೇಶಿಕ ಆಯುಕ್ತ ಹಾಗೂ ಆಡಳಿತಾಧಿಕಾರಿ ನಿತೇಶ್ ಪಾಟೀಲ ಅವರು ವಿಶೇಷ ಸಭೆಯಲ್ಲಿ ಬಜೆಟ್ ಮಂಡಿಸಿದರು. ಒಟ್ಟು ಖರ್ಚು 1,300.92 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಪಾಲಿಕೆಯಲ್ಲಿ ಜನಪ್ರತಿನಿಧಿಗಳಿಲ್ಲದ ಕಾರಣ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು. ಯಾವುದೇ ಚರ್ಚೆ ನಡೆಯಲಿಲ್ಲ.  ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸಿಫ್‌ ಅವರು ಇದ್ದರು.

ಆದಾಯ ಮೂಲಗಳು:
ಆಸ್ತಿ ತೆರಿಗೆ, ನೀರಿನ ತೆರಿಗೆ, ಒಳಚರಂಡಿ ಕರ, ವಿವಿಧ ಶುಲ್ಕಗಳು, ಬಾಡಿಗೆ, ಜಾಹೀರಾತು ಶುಲ್ಕ ಮತ್ತು ಕೇಂದ್ರ-ರಾಜ್ಯ ಅನುದಾನಗಳು.

ಏಲ್ಲೆಲ್ಲಿಗೆ ಏನೇನು?
1. ಕುಂಬಾರಕೊಪ್ಪಲಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 50ಲಕ್ಷ ರೂಪಾಯಿಗಳು ಅನುದಾನ

2. ಟೌನ್ ಹಾಲ್ ಅಭಿವೃದ್ಧಿಗೆ 30 ಲಕ್ಷ ರೂಪಾಯಿಗಳು

3.ಕೃಷ್ಣರಾಜ, ಚಾಮರಾಜ, ನರಸಿಂಹ ರಾಜ ಕ್ಷೇತ್ರದಲ್ಲಿ ಈಜು ಕೊಳ ನಿರ್ಮಾಣ

4. ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ಅನುದಾನ

5. ಜೆಪಿ ನಗರದ ಪುಟ್ಟರಾಜ ಗವಾಯಿ ಕ್ರೀಡಾಂಗಣ ಅಭಿವೃದ್ಧಿಗೆ 1.10 ಕೋಟಿ ಮೀಸಲು

6. ಚಾಮರಾಜ, ಕೃಷ್ಣರಾಜ, ನರಸಿಂಹ ರಾಜ ಕ್ಷೇತ್ರದ ವೃತ್ತಗಳ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಅನುದಾನ

7. ಪಾಲಿಕೆ ವ್ಯಾಪ್ತಿಯ ಚರಂಡಿ ರಸ್ತೆಗಳ ಅಭಿವೃದ್ಧಿಗೆ 30 ಕೋಟಿ

8. ಪ್ರವಾಸಿ ತಾಣ ಜನನಿಬಿಡ ಪ್ರದೇಶಗಳಲ್ಲಿ ಪಾರಂಪರಿಕ ಶೈಲಿಯ ಶೌಚಾಲಯ ನಿರ್ಮಾಣ

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

11 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

12 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

12 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

17 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

18 hours ago