ಮೈಸೂರು ನಗರ

ಮೈಸೂರು ಮಹಾನಗರ ಪಾಲಿಕೆ : 10.20ಕೋಟಿ ಉಳಿತಾಯ ಬಜೆಟ್‌ಗೆ ಅನುಮೋದನೆ

ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್‌ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು 10.20 ಕೋಟಿ ಉಳಿತಾಯ ಬಜೆಟ್ ಆಗಿದೆ.

ಪ್ರಾದೇಶಿಕ ಆಯುಕ್ತ ಹಾಗೂ ಆಡಳಿತಾಧಿಕಾರಿ ನಿತೇಶ್ ಪಾಟೀಲ ಅವರು ವಿಶೇಷ ಸಭೆಯಲ್ಲಿ ಬಜೆಟ್ ಮಂಡಿಸಿದರು. ಒಟ್ಟು ಖರ್ಚು 1,300.92 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಪಾಲಿಕೆಯಲ್ಲಿ ಜನಪ್ರತಿನಿಧಿಗಳಿಲ್ಲದ ಕಾರಣ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು. ಯಾವುದೇ ಚರ್ಚೆ ನಡೆಯಲಿಲ್ಲ.  ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸಿಫ್‌ ಅವರು ಇದ್ದರು.

ಆದಾಯ ಮೂಲಗಳು:
ಆಸ್ತಿ ತೆರಿಗೆ, ನೀರಿನ ತೆರಿಗೆ, ಒಳಚರಂಡಿ ಕರ, ವಿವಿಧ ಶುಲ್ಕಗಳು, ಬಾಡಿಗೆ, ಜಾಹೀರಾತು ಶುಲ್ಕ ಮತ್ತು ಕೇಂದ್ರ-ರಾಜ್ಯ ಅನುದಾನಗಳು.

ಏಲ್ಲೆಲ್ಲಿಗೆ ಏನೇನು?
1. ಕುಂಬಾರಕೊಪ್ಪಲಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 50ಲಕ್ಷ ರೂಪಾಯಿಗಳು ಅನುದಾನ

2. ಟೌನ್ ಹಾಲ್ ಅಭಿವೃದ್ಧಿಗೆ 30 ಲಕ್ಷ ರೂಪಾಯಿಗಳು

3.ಕೃಷ್ಣರಾಜ, ಚಾಮರಾಜ, ನರಸಿಂಹ ರಾಜ ಕ್ಷೇತ್ರದಲ್ಲಿ ಈಜು ಕೊಳ ನಿರ್ಮಾಣ

4. ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ಅನುದಾನ

5. ಜೆಪಿ ನಗರದ ಪುಟ್ಟರಾಜ ಗವಾಯಿ ಕ್ರೀಡಾಂಗಣ ಅಭಿವೃದ್ಧಿಗೆ 1.10 ಕೋಟಿ ಮೀಸಲು

6. ಚಾಮರಾಜ, ಕೃಷ್ಣರಾಜ, ನರಸಿಂಹ ರಾಜ ಕ್ಷೇತ್ರದ ವೃತ್ತಗಳ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಅನುದಾನ

7. ಪಾಲಿಕೆ ವ್ಯಾಪ್ತಿಯ ಚರಂಡಿ ರಸ್ತೆಗಳ ಅಭಿವೃದ್ಧಿಗೆ 30 ಕೋಟಿ

8. ಪ್ರವಾಸಿ ತಾಣ ಜನನಿಬಿಡ ಪ್ರದೇಶಗಳಲ್ಲಿ ಪಾರಂಪರಿಕ ಶೈಲಿಯ ಶೌಚಾಲಯ ನಿರ್ಮಾಣ

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

14 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

18 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

23 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

34 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

39 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

45 mins ago