ಮೈಸೂರು ನಗರ

ಮೈಸೂರು | ಫ್ಲೈಓವರ್‌ ನಿರ್ಮಾಣಕ್ಕೆ ಸಂಸದ ಯದುವೀರ್‌ ವಿರೋಧ

ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಜೆಎಲ್‍ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ಧಪಡಿಸುತ್ತಿದ್ದಾರೆ. ಇದಕ್ಕೆ ನಮ ತೀವ್ರ ವಿರೋಧವಿದೆ ಎಂದಿದ್ದಾರೆ.

ಇದನ್ನು ಓದಿ: ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಪ್ರಕರಣ: ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ವಿನೋಬಾ ರಸ್ತೆಯಲ್ಲಿ ಫ್ಲೈಓವರ್ ನಿರ್ಮಿಸಲು ಮುಂದಾದರೆ ಮರಗಳ ಹರಣವಾಗಲಿದೆ. ಹಾಗಾಗಿ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಮಾಡಬಾರದು. ಅಭಿವೃದ್ಧಿ ನೆಪದಲ್ಲಿ ಮೈಸೂರಿನ ಸೌಂದರ್ಯ ಹಾಳು ಮಾಡಬಾರದು. ಪಾರಂಪರಿಕ ನಗರಿಯ ಗುರುತು ಉಳಿಸಿಕೊಳ್ಳಬೇಕು. ಸಿಎಂ ಕೂಡ ಗ್ರೇಟರ್ ಮೈಸೂರು ಸಭೆಯಲ್ಲಿ ಮೈಸೂರಿನ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕೆಂದು ಹೇಳಿದ್ದಾರೆ.

ಫ್ಲೈಓವರ್ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ. ಮೆಟ್ರೋ ಮಾರ್ಗ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಮುಂಬೈ ಮಾದರಿಯಲ್ಲಿ ಅಂಡರ್ ಗ್ರೌಂಡ್‍ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ. ಮೈಸೂರಿನ ಜನಸಂಖ್ಯೆಗನುಗುಣವಾಗಿ ಕಾಮಗಾರಿ ಕೈಗೊಳ್ಳಲಿ, ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಮಾಡಲಿ, ಜನರ ವಿರೋಧದ ನಡುವೆ ಫ್ಲೈಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಜನರ ಸಹಕಾರದೊಂದಿಗೆ ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ಗ್ರೇಟರ್ ಮೈಸೂರಿನಿಂದ ಒಳಿತಾಗಲಿದೆ. ಆದರೆ ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಬೆಂಗಳೂರು ಮಾದರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಬಾರದು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

9 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

9 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

10 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

11 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

11 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

11 hours ago