ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಅವರು, ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಕೆ ಮಾಡಿದ್ದೇನೆ ಎಂದರು.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿಗೆ 50:50 ಅನುಪಾತದಲ್ಲಿ ನೀಡಿರುವ 14 ನಿವೇಶನಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದು, ಪ್ರಕರಣವನ್ನ ಲೋಕಾಯುಕ್ತದಿಂದ ಸಿಬಿಐಗೆ ವರ್ಗಾಯಿಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕಳೆದ ತಿಂಗಳ ಫೆಬ್ರವರಿ.7ರಂದು ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಈಗ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ಮೂಲಕ ಸ್ನೇಹಮಯಿ ಕೃಷ್ಣ ಅವರು, ಮತ್ತೆ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿಯಾದ…
ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…