ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನಾಗೇಂದ್ರ ಎಂಬುವವರು ಲೋಕಾಯುಕ್ತಕ್ಕೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ನಗರಾಭಿವೃದ್ಧಿ ಆಯುಕ್ತರು ಹಾಗೂ ಸಿಬ್ಬಂದಿ ಸೇರಿ ಕಾನೂನು ಬಾಹಿರವಾಗಿ ರಘು ಕೌಟಿಲ್ಯ ಅವರಿಗೆ ನಿವೇಶನ ಮಂಜೂರು ಮಾಡಿದ್ದಾರೆ. ಹೀಗಾಗಿ ಅಕ್ರಮವಾಗಿ ನಿವೇಶನ ಪಡೆದಿರುವ ರಘು ಕೌಟಿಲ್ಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ನಾಗೇಂದ್ರ ಒತ್ತಾಯ ಮಾಡಿದ್ದಾರೆ.
ಇದರ ಜೊತೆಗೆ ಈ ನಿವೇಶನವನ್ನು ನಗರಾಭಿವೃದ್ಧಿ ಪ್ರಾಧಿಕಾರದವರು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ನಾಗೇಂದ್ರ ಮನವಿ ಮಾಡಿದ್ದಾರೆ.
ಈ ಮೂಲಕ ಬಿಜೆಪಿ ಮುಖಂಡ ರಘು ಕೌಟಿಲ್ಯ ಅವರಿಗೆ ಮುಡಾ ಹಗರಣದಲ್ಲಿ ಭಾರೀ ಸಂಕಷ್ಟ ಎದುರಾಗಿದ್ದು, ಆರೋಪ ನಿಜವಾದರೆ ಅವರೂ ಕೂಡ ಮುಡಾ ಹಗರಣದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…
ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…
ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…
೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್ನಲ್ಲಿದ್ದ ಸುಮಾರು ೧೮…
ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…