ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನಾಗೇಂದ್ರ ಎಂಬುವವರು ಲೋಕಾಯುಕ್ತಕ್ಕೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ನಗರಾಭಿವೃದ್ಧಿ ಆಯುಕ್ತರು ಹಾಗೂ ಸಿಬ್ಬಂದಿ ಸೇರಿ ಕಾನೂನು ಬಾಹಿರವಾಗಿ ರಘು ಕೌಟಿಲ್ಯ ಅವರಿಗೆ ನಿವೇಶನ ಮಂಜೂರು ಮಾಡಿದ್ದಾರೆ. ಹೀಗಾಗಿ ಅಕ್ರಮವಾಗಿ ನಿವೇಶನ ಪಡೆದಿರುವ ರಘು ಕೌಟಿಲ್ಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ನಾಗೇಂದ್ರ ಒತ್ತಾಯ ಮಾಡಿದ್ದಾರೆ.
ಇದರ ಜೊತೆಗೆ ಈ ನಿವೇಶನವನ್ನು ನಗರಾಭಿವೃದ್ಧಿ ಪ್ರಾಧಿಕಾರದವರು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ನಾಗೇಂದ್ರ ಮನವಿ ಮಾಡಿದ್ದಾರೆ.
ಈ ಮೂಲಕ ಬಿಜೆಪಿ ಮುಖಂಡ ರಘು ಕೌಟಿಲ್ಯ ಅವರಿಗೆ ಮುಡಾ ಹಗರಣದಲ್ಲಿ ಭಾರೀ ಸಂಕಷ್ಟ ಎದುರಾಗಿದ್ದು, ಆರೋಪ ನಿಜವಾದರೆ ಅವರೂ ಕೂಡ ಮುಡಾ ಹಗರಣದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…