ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನಾಗೇಂದ್ರ ಎಂಬುವವರು ಲೋಕಾಯುಕ್ತಕ್ಕೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ನಗರಾಭಿವೃದ್ಧಿ ಆಯುಕ್ತರು ಹಾಗೂ ಸಿಬ್ಬಂದಿ ಸೇರಿ ಕಾನೂನು ಬಾಹಿರವಾಗಿ ರಘು ಕೌಟಿಲ್ಯ ಅವರಿಗೆ ನಿವೇಶನ ಮಂಜೂರು ಮಾಡಿದ್ದಾರೆ. ಹೀಗಾಗಿ ಅಕ್ರಮವಾಗಿ ನಿವೇಶನ ಪಡೆದಿರುವ ರಘು ಕೌಟಿಲ್ಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ನಾಗೇಂದ್ರ ಒತ್ತಾಯ ಮಾಡಿದ್ದಾರೆ.
ಇದರ ಜೊತೆಗೆ ಈ ನಿವೇಶನವನ್ನು ನಗರಾಭಿವೃದ್ಧಿ ಪ್ರಾಧಿಕಾರದವರು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ನಾಗೇಂದ್ರ ಮನವಿ ಮಾಡಿದ್ದಾರೆ.
ಈ ಮೂಲಕ ಬಿಜೆಪಿ ಮುಖಂಡ ರಘು ಕೌಟಿಲ್ಯ ಅವರಿಗೆ ಮುಡಾ ಹಗರಣದಲ್ಲಿ ಭಾರೀ ಸಂಕಷ್ಟ ಎದುರಾಗಿದ್ದು, ಆರೋಪ ನಿಜವಾದರೆ ಅವರೂ ಕೂಡ ಮುಡಾ ಹಗರಣದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…