ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ಮುಡಾದಲ್ಲಿ ಭಾರೀ ಹಗರಣ ನಡೆದಿದೆ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇ.ಡಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ 20ಕ್ಕೂ ಹೆಚ್ಚು ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.
ಪರಿಶೀಲನೆ ವೇಳೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯರಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವೈಟ್ನರ್ ಹಾಕಿದ್ದ ಮೂಲ ದಾಖಲೆ ಹಾಗೂ ವೈಟ್ನರ್ ಹಾಕದ ಮೂಲ ದಾಖಲೆಯನ್ನು ಸಹ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಮೂಲಕ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದ್ದು, ಅವರಿಗೂ ಕೂಡ ಇ.ಡಿ ನೋಟಿಸ್ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇನ್ನು ಇ.ಡಿ ಅಧಿಕಾರಿಗಳು ಮುಡಾ ಕಚೇರಿಗೆ ಆಗಮಿಸಿದ್ದು, ಕಚೇರಿಯಲ್ಲಿ ಎಲ್ಲಾ ಮೂಲ ಶಿಫಾರಸ್ಸು ಪತ್ರ ವಶಕ್ಕೆ ಪಡೆದಿದೆ. ಶಿಫಾರಸ್ಸು ಪತ್ರಗಳ ಜಾಡು ಹಿಡಿದು ತನಿಖೆ ಆರಂಭಿಸಿದ್ದು, ಮುಡಾ ಸದಸ್ಯರ ಜಾತಕ ಇ.ಡಿ ಅಧಿಕಾರಿಗಳ ಕೈಯಲ್ಲಡಗಿದೆ ಎನ್ನಲಾಗುತ್ತಿದೆ.
ಇಂದು ಕೂಡ ಮುಡಾ ಕಚೇರಿಗೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಇಂದು ಸಂಜೆಯವರೆಗೂ ಮುಡಾ ಕಚೇರಿಯಲ್ಲಿ ನಡೆದ ಪ್ರತಿ ಸಭೆಯ ವರದಿಗಳನ್ನು ಪರಿಶೀಲನೆ ನಡೆಸಲಿದ್ದಾರೆ. ಇದಲ್ಲದೇ ಎಲ್ಲಾ ಸೈಟ್ಗಳ ದಾಖಲೆಗಳನ್ನು ಸಹ ಪರಿಶೀಲನೆ ನಡೆಸುವ ಸಾಧ್ಯತೆಯಿದೆ.
ಇನ್ನು ಇ.ಡಿ ಅಧಿಕಾರಿಗಳು ಎಲ್ಲಾ ಮೂಲ ಶಿಫಾರಸು ಪತ್ರಗಳನ್ನು ವಶಕ್ಕೆ ಪಡೆದಿದ್ದು, ಈ ಮೊದಲಿನಿಂದ ಮುಡಾದಲ್ಲಿ ಸದಸ್ಯರಾಗಿದ್ದ ನಾಯಕರಿಗೂ ನಡುಕ ಶುರುವಾಗಿದೆ ಎನ್ನಲಾಗಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…