ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಇಂದು ಬೆಳಿಗ್ಗೆ 9 ಕಡೆಗಳಲ್ಲಿ ದಾಳಿ ನಡೆಸಿದ್ದು, ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೂ ದಾಳಿ ನಡೆಸಿದ್ದಾರೆ.
ಮುಡಾ ಹಗರಣದ 50:50 ಅನುಪಾತದ ಬದಲಿ ನಿವೇಶನದಲ್ಲಿ ಅಕ್ರಮವಾಗಿದೆ ಎಂಬ ವಿಚಾರವಾಗಿ ರಾಕೇಶ್ ಪಾಪಣ್ಣ ಅವರು 20ಕ್ಕೂ ಅಧಿಕ ಮುಡಾ ನಿವೇಶನಗಳನ್ನು ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಆರೋಪದ ಬೆನ್ನಲ್ಲೇ ಮೈಸೂರು ನಗರದ ಹಿನಕಲ್ ಗ್ರಾಮದಲ್ಲಿರುವ ರಾಕೇಶ್ ಪಾಪಣ್ಣ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ, ರಾಕೇಶ್ ಅವರನ್ನು ವಿಚಾರಣೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ದಿನಕಳೆದಂತೆ ಮುಡಾ ಹಗರಣ ಕಾವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಮುಂದೆ ಇದು ರಾಜ್ಯ ಸರ್ಕಾರದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು…
ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾ ಸೇನಾ ವಿಮಾನ ಪತನಗೊಂಡ ಪರಿಣಾಮ 29 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಕ್ಷಣಾ ಸಚಿವಾಲಯದ…
ವಾಷಿಂಗ್ಟನ್: ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಇರಾನ್ ವಿರುದ್ಧದ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…
ಬೆಂಗಳೂರು: ಕಾಪಿ ರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್ 25 ಲಕ್ಷ ದಂಡ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…