ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ.
ಈ ಹಿನ್ನೆಲೆಯಲ್ಲಿ ಹಗರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಇದರಲ್ಲಿ ಅಧಿಕಾರಿಗಳು ಮಾಹಿತಿಯನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ಪತ್ರ ಬರೆದು ಆರೋಪ ಮಾಡಿದ್ದಾರೆ.
ಮುಡಾ ಅಧಿಕಾರಿಗಳು ಮತ್ತು ಕೆಲವು ಸರ್ಕಾರಿ ಸಂಸ್ಥೆಗಳೊಂದಿಗೆ ಲೋಕಾಯುಕ್ತ ಅಧಿಕಾರಿಗಳು ಶಾಮೀಲಾಗಿದ್ದಾರೆ.
ಮುಡಾ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ಲೋಕಾಯುಕ್ತ ಅಧಿಕಾರಿಗಳು ಕಾನೂನಿನ ಪ್ರಕಾರ ಕಾರ್ಯ ನಿರ್ವಹಿಸುತ್ತಿಲ್ಲ.
ಹೀಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…