ಮೈಸೂರು ನಗರ

ಮೈಸೂರು ಮುಡಾ ಕೇಸ್‌ ತನಿಖೆಗೆ ಲೋಕಾಯುಕ್ತ ಎಂಟ್ರಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮಗಳು ಬಗೆದಷ್ಟು ಬಯಲಾಗ್ತಿವೆ. ಈ ಹೊತ್ತಲ್ಲೆ ಮುಡಾ ತನಿಖೆಗೆ ಲೋಕಾಯುಕ್ತ ಎಂಟ್ರಿಕೊಟ್ಟಿದೆ.

ಮೈಸೂರು ಹಿನಕಲ್‌ನ ಸರ್ವೆ ನಂಬರ್‌ 89ರ 7.18 ಎಕರೆ ಭೂಮಿಯನ್ನು 350ಕ್ಕೂ ಹೆಚ್ಚು ಪ್ರಭಾವಿಗಳು ಅಧಿಕಾರಿಗಳಿಗೆ ನಿವೇಶನ ರೂಪದಲ್ಲಿ ನೀಡಿರುವ ಸಂಬಂಧ ಲೋಕಾಯುಕ್ತ ತನಿಖೆಗೆ ಇಳಿದಿದೆ.

ಕಳೆದ 2017ರ ಅವಧಿಯಲ್ಲಿ ಪ್ರಾಧಿಕಾರದಲ್ಲಿ ಕೆಲಸ ಮಾಡಿದ್ದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್‌ ನೀಡಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಡ ಆಯುಕ್ತರ ನಿವಾಸದಲ್ಲಿದ್ದ ಸಿಸಿ ಕ್ಯಾಮರಾ, ಡಿವಿಆರ್‌ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇನ್ನು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ತೊರೆಯುವ ಸನ್ನಿವೇಶ ಸೃಷ್ಟಿಯಾದ್ರೆ ಸಿಎಂ ಆಗೋಣ ಎಂದು ಹಲವು ಕಾಂಗ್ರೆಸ್‌ ನಾಯಕರು ಕಾದು ಕುಳಿತಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

34 mins ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

2 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

3 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

4 hours ago