ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರಿಂದು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆಂದು ಆಗಮಿಸಿದ್ದಾರೆ.
ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ದಿನದಿಂದ ದಿನಕ್ಕೆ ಹಗರಣದ ಸುದ್ದಿ ಜಾಸ್ತಿಯಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಅವರೇ ಹಗರಣದ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಡಾ ಕೇಸ್ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.
ಇನ್ನು ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿಂದು ಸಿಎಂ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸುತ್ತಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನಸ್ವಾಮಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿಚಾರಣೆ ಬಳಿಕವೇ ಸತ್ಯಾಂಶ ಹೊರಬರಬೇಕಾಗಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…