ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರಿಂದು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆಂದು ಆಗಮಿಸಿದ್ದಾರೆ.
ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ದಿನದಿಂದ ದಿನಕ್ಕೆ ಹಗರಣದ ಸುದ್ದಿ ಜಾಸ್ತಿಯಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಅವರೇ ಹಗರಣದ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಡಾ ಕೇಸ್ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.
ಇನ್ನು ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿಂದು ಸಿಎಂ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸುತ್ತಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನಸ್ವಾಮಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿಚಾರಣೆ ಬಳಿಕವೇ ಸತ್ಯಾಂಶ ಹೊರಬರಬೇಕಾಗಿದೆ.
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…