ಮೈಸೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶಾಸಕ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಲೇಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದ್ದಾರೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಯಾರೇ ಆದರೂ ಜಿ-ಕ್ಯಾಟಗರಿ ಸೈಟ್ ಪಡೆಯಬೇಕಾದರೆ ಸಾಂವಿಧಾನಿಕ ಹುದ್ದೆಯಲ್ಲಿರಬೇಕು. ಆದರೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ. ಒಬ್ಬ ಬಿಜೆಪಿ ಕಾರ್ಯಕರ್ತ ಹೇಗೆ ಸೈಟ್ ಪಡೆಯಲು ಸಾಧ್ಯ. ಈ ಬಗ್ಗೆ ಶ್ರೀವತ್ಸ ಸ್ಪಷ್ಟನೆ ನೀಡಲಿ ಎಂದು ಆಗ್ರಹಿಸಿದರು.
ಇನ್ನು ಸುಳ್ಳನ್ನೇ ಹತ್ತು ಬಾರಿ ಹೇಳಿ ಜನರಿಗೆ ನಂಬಿಸುವ ಕೆಲಸವನ್ನು ಬಿಜೆಪಿ-ಜೆಡಿಎಸ್ನವರು ಮಾಡುತ್ತಿದ್ದಾರೆ. ಇದು ದೊಡ್ಡ ದುರಂತದ ಸಂಗತಿ. ವೈಟ್ನರ್ ಹಾಕಿರುವುದನ್ನು ನೀವೇ ಊಹೇ ಮಾಡಿಕೊಂಡು ಸುಳ್ಳು ಹೇಳುವುದು ಖಂಡನೀಯ. ಸಿದ್ದರಾಮಯ್ಯ ಅವರಿಗೆ ಕೆಲಸ ಮಾಡಲು ಬಿಡುತ್ತಾ ಇಲ್ಲ. ಪ್ರಕರಣ ತನಿಖೆಯಲ್ಲಿದೆ. ತನಿಖೆ ಮುಗಿದ ಬಳಿಕ ವರದಿ ಏನು ಬರುತ್ತೆ ಕಾದು ನೋಡೋಣ ಎಂದರು.
ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ 63 ಕೇಸ್ಗಳಿವೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, 2007ರಿಂದ 2023ರವರೆಗೆ ಸಿದ್ದರಾಮಯ್ಯ ಅವರ ಮೇಲಿರುವ ಕೇಸ್ಗಳು ಕೇವಲ 20. ಅವುಗಳೆಲ್ಲಾ ಬಹುತೇಕ ಸಣ್ಣ-ಪುಟ್ಟ ಕೇಸ್ಗಳು ಅಷ್ಟೇ. ಯಾವ ಆಧಾರದ ಮೇಲೆ ಕುಮಾರಸ್ವಾಮಿ ಅವರು 63 ಕೇಸ್ ಇವೆ ಅಂತ ಹೇಳಿದ್ರು ಗೊತ್ತಿಲ್ಲ ಎಂದು ಟೀಕೆ ಮಾಡಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…