ಮೈಸೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶಾಸಕ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಲೇಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದ್ದಾರೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಯಾರೇ ಆದರೂ ಜಿ-ಕ್ಯಾಟಗರಿ ಸೈಟ್ ಪಡೆಯಬೇಕಾದರೆ ಸಾಂವಿಧಾನಿಕ ಹುದ್ದೆಯಲ್ಲಿರಬೇಕು. ಆದರೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ. ಒಬ್ಬ ಬಿಜೆಪಿ ಕಾರ್ಯಕರ್ತ ಹೇಗೆ ಸೈಟ್ ಪಡೆಯಲು ಸಾಧ್ಯ. ಈ ಬಗ್ಗೆ ಶ್ರೀವತ್ಸ ಸ್ಪಷ್ಟನೆ ನೀಡಲಿ ಎಂದು ಆಗ್ರಹಿಸಿದರು.
ಇನ್ನು ಸುಳ್ಳನ್ನೇ ಹತ್ತು ಬಾರಿ ಹೇಳಿ ಜನರಿಗೆ ನಂಬಿಸುವ ಕೆಲಸವನ್ನು ಬಿಜೆಪಿ-ಜೆಡಿಎಸ್ನವರು ಮಾಡುತ್ತಿದ್ದಾರೆ. ಇದು ದೊಡ್ಡ ದುರಂತದ ಸಂಗತಿ. ವೈಟ್ನರ್ ಹಾಕಿರುವುದನ್ನು ನೀವೇ ಊಹೇ ಮಾಡಿಕೊಂಡು ಸುಳ್ಳು ಹೇಳುವುದು ಖಂಡನೀಯ. ಸಿದ್ದರಾಮಯ್ಯ ಅವರಿಗೆ ಕೆಲಸ ಮಾಡಲು ಬಿಡುತ್ತಾ ಇಲ್ಲ. ಪ್ರಕರಣ ತನಿಖೆಯಲ್ಲಿದೆ. ತನಿಖೆ ಮುಗಿದ ಬಳಿಕ ವರದಿ ಏನು ಬರುತ್ತೆ ಕಾದು ನೋಡೋಣ ಎಂದರು.
ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ 63 ಕೇಸ್ಗಳಿವೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, 2007ರಿಂದ 2023ರವರೆಗೆ ಸಿದ್ದರಾಮಯ್ಯ ಅವರ ಮೇಲಿರುವ ಕೇಸ್ಗಳು ಕೇವಲ 20. ಅವುಗಳೆಲ್ಲಾ ಬಹುತೇಕ ಸಣ್ಣ-ಪುಟ್ಟ ಕೇಸ್ಗಳು ಅಷ್ಟೇ. ಯಾವ ಆಧಾರದ ಮೇಲೆ ಕುಮಾರಸ್ವಾಮಿ ಅವರು 63 ಕೇಸ್ ಇವೆ ಅಂತ ಹೇಳಿದ್ರು ಗೊತ್ತಿಲ್ಲ ಎಂದು ಟೀಕೆ ಮಾಡಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…