ಮೈಸೂರು ನಗರ

ಮೈಸೂರು ಮುಡಾ ಕೇಸ್:‌ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನಿನ್ನೆ ಗಂಭೀರ ಆರೋಪ ಮಾಡಿದ್ದರು. ಇಬ್ಬರು ವ್ಯಕ್ತಿಗಳು ನನಗೆ ಹಣದ ಆಮಿಷವೊಡ್ಡಲು ಬಂದಿದ್ದರು ಎಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಲಕ್ಷ್ಮಣ್‌ ಅವರು, ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುವವರು ಯಾರು ಅನ್ನೋದು ಗೊತ್ತಿದೆ ಎಂದು ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಯಾವುದೇ ಕಾರಣಕ್ಕೂ ಅಂತಹ ಕೀಳು ಮಟ್ಟಕ್ಕೆ ಇಳಿಯುವವರಲ್ಲ. ಸ್ನೇಹಮಯಿ ಕೃಷ್ಣ ಅವರೇ ಹಣದ ಆಮಿಷಕ್ಕೆ ಒಳಗಾಗಿ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸುಳ್ಳು ಪತ್ರ ನೀಡಿದ್ದಾರೆ ಎಂದರು.

ಸ್ನೇಹಮಯಿ ಕೃಷ್ಣ ಆಮಿಷಕ್ಕೆ ಒಳಗಾಗದಿದ್ದರೆ ಇವರ ಪುತ್ರ ಏಕೆ ಹರ್ಷ ಮತ್ತು ಶ್ರೀನಿಧಿ ಜೊತೆ ಹೋದರು. ಈ ದೂರಿಗೆ ಸಂಬಂಧಿಸಿದಂತೆ ಅಂದಿನ ಇಡೀ ದಿನದ ಫುಟೇಜ್‌ ನೀಡದೇ ಬೆಳಿಗ್ಗೆ 10.30ರ ಫುಟೇಜ್‌ ಮಾತ್ರ ನೀಡಿದ್ದಾರೆ. ನಮ್ಮ ಬಳಿಯೂ ಕೆಲವು ಫುಟೇಜ್‌ಗಳಿವೆ ಅವುಗಳನ್ನು ಪೊಲೀಸರಿಗೆ ನೀಡುತ್ತೇವೆ ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಅವರು, ನೀವು ಯಾರ ಬಳಿಯೂ ಆಮಿಷಕ್ಕೆ ಒಳಗಾಗಿಲ್ವಾ? ಎಂದು ಪ್ರಶ್ನಿಸಿದರು. ಈ ಕೇಸ್‌ಗೆ ಸಂಬಂಧಿಸಿದಂತೆ ನ್ಯಾಯಾಲಯದ ಹೋರಾಟ ಮಾಡಲು ನಿಮಗೆ ಹಣ ಎಲ್ಲಿಂದ ಬರುತ್ತೆ? ನಿಮಗೆ ಸಂಪೂರ್ಣ ಬೆಂಬಲ ನೀಡುತ್ತಿರುವುದು ಯಾರು ಎಂದು ಎಲ್ಲವೂ ಗೊತ್ತಿದೆ. ಈ ಕೇಸ್‌ನಲ್ಲಿ ಸ್ನೇಹಮಯಿ ಕೃಷ್ಣನದು ಕೇವಲ ಸೈಡ್‌ ರೋಲ್‌ ಅಷ್ಟೇ ಆದರೆ ಡೈರೆಕ್ಟರ್‌, ನಿರ್ಮಾಪಕರು ಬೇರೆ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

7 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

7 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

8 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

8 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

9 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

9 hours ago