ಮೈಸೂರು ನಗರ

ನನ್ನಂಥ ರಾಜಕಾರಣಿ ಈ ದೇಶದಲ್ಲೇ ಯಾರು ಇಲ್ಲ ಎಂದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಮೈಸೂರು ಮುಡಾದಲ್ಲಿ ನಡೆಸಿರುವ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು, ಕಾಂಗ್ರೆಸ್‌ ಹಾಗೂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು, ಕಾಂಗ್ರೆಸ್‌ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ನಾನು ಸಾಲ ಮಾಡಿಕೊಂಡು ರಾಜಕಾರಣ ಮಾಡಿದ್ದೇನೆ. ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಜವಾಬ್ದಾರಿಯಿಂದ ಇಲಾಖೆ ನಡೆಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ವಿರುದ್ಧ ಬಂದ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನಂಥಹ ರಾಜಕಾರಣಿ ಈ ದೇಶದಲ್ಲೇ ಯಾರು ಇಲ್ಲ. ನಾನು ಇದುವರೆಗೂ ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮುಂದೆ ಮಾಡೋದು ಇಲ್ಲ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರು ನನಗೆ 1 ಎಕರೆ ಜಾಗ ಕೊಟ್ಟಿದ್ದೇವೆ ಅಂತಾ ಸಿಎಂ ಪಕ್ಕದಲ್ಲೇ ಕೂತು ಹೇಳಿದ್ದಾರೆ. ನನ್ನ ರಾಜಕೀಯ ಜೀವನ ನಿಮಗೆ ಗೊತ್ತಿಲ್ಲ. ನಾನು ಪ್ರಗತಿಪರ ರೈತನಾಗಿ ದುಡಿದು ಜಮೀನು ಖರೀದಿ ಮಾಡಿದ್ದೇನೆ ಎಂದು ತಮ್ಮ ವಿರುದ್ಧ ಬಂದಿರುವ ಆರೋಪವನ್ನು ತಳ್ಳಿ ಹಾಕಿದರು.

ರಾಜ್ಯದ 224 ಕ್ಷೇತ್ರಗಳ ಶಾಸಕರ ಬಗ್ಗೆಯೂ ತನಿಖೆ ಮಾಡಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸ ಮಾಡಲಿ. ಒಂದು ವಾರದೊಳಗೆ ನಗರಾಭಿವೃದ್ಧಿ ಈ ಬಗ್ಗೆ ಸಚಿವರು ಉತ್ತರ ಕೊಡಬೇಕು. ಇಲ್ಲದಿದ್ದರೆ ನಾನೇ ಅವರಿಗೆ ನೋಟಿಸ್‌ ಜಾರಿ ಮಾಡುತ್ತೇನೆ. ನನ್ನ ವಿರುದ್ಧ ಮಾಡಿರುವ ಆರೋಪ ಸಾಬೀತು ಮಾಡದಿದ್ದರೆ ಸಚಿವರ ವಿರುದ್ಧ ಕಾನೂನು ಸಮರ ನಡೆಸುತ್ತೇನೆ. ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

16 mins ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

43 mins ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

1 hour ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

1 hour ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

1 hour ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

11 hours ago