ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ಧರಿಸುವ ಶ್ವೇತವಸ್ತ್ರದ ಮೇಲೆ ಕಪ್ಪು ಚುಕ್ಕೆ ಬಿದ್ದಿದೆ ಎಂದ ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಾನು ಕಾನೂನು ಬದ್ಧವಾಗಿಯೇ ನಿವೇಶನ ಪಡೆದಿದ್ದೇನೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಡಾ ಹಾಗೂ ವಾಲ್ಮೀಕಿ ಹಗರಣದಿಂದ ತತ್ತರಿಸಿ ಹೋಗಿದೆ. ಈ ಹಗರಣಗಳು ಬೆಳಕಿಗೆ ಬಂದಾಗಿನಿಂದ ಸಿಎಂ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ತಮ್ಮ ಹೆಂಡತಿ ಹೆಸರಿನಲ್ಲಿ ಸೈಟು ಪಡೆದಿರುವುದು ನಾಚಿಕೆಗೇಡು. ನಗರಾಭಿವೃದ್ಧಿ ಸಚಿವನನ್ನು ಕೂರಿಸಿಕೊಂಡು ಸಿದ್ದರಾಮಯ್ಯ ಸುದ್ದಿಗೋಷ್ಠಿ ಮಾಡಿದ್ದರು. ಆ ಸಚಿವ ಕಂತ್ರಿ ರೀತಿ ವರ್ತಿಸುತ್ತಿದ್ದಾನೆ. ಸಿದ್ದರಾಮಯ್ಯ ಶ್ವೇತವಸ್ತ್ರ ಧರಿಸುತ್ತಿದ್ದಾರೆ. ಆ ಶ್ವೇತ ವಸ್ತ್ರದ ಮೇಲೆ ಕಪ್ಪು ಚುಕ್ಕೆ ಬಿದ್ದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಈಗ ಎಚ್ಚೆತ್ತುಕೊಳ್ಳದಿದ್ದರೆ ಅವರ ಜೊತೆಯಲ್ಲಿರುವವರೇ ಕಪ್ಪು ಮಸಿ ಬಳಿದು ಹೋಗುತ್ತಾರೆ. ನಿಮ್ಮ ತಪ್ಪಿನಿಂದ ಏನೂ ಅರಿಯದ ನಿಮ್ಮ ಪತ್ನಿ ಪಾರ್ವತಿಯವರ ಹೆಸರಿಗೆ ಕಳಂಕ ಬರುವಂತಾಗಿದೆ. ರಾಜ್ಯದಲ್ಲಿ ಹಿಂದೆಂದೂ ಇಷ್ಟೊಂದು ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿರಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮುಡಾ ಹಗರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಮುಡಾ ಆಯುಕ್ತರ ವರ್ಗಾವಣೆ ಬಳಿಕವೂ ಅಕ್ರಮ ಮುಂದುವರಿದಿದೆ ಎಂದು ಗಂಭೀರ ಆರೋಪ ಮಾಡಿದ ಅವರು, ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ ಎಂದರು.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪ್ರತಿಯೊಬ್ಬರಿಗೂ ನಾಗರಿಕ ಪ್ರಜ್ಞೆ ಅಗತ್ಯ

ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು…

1 hour ago

ಓದುಗರ ಪತ್ರ: ಸಾರ್ವಜನಿಕವಾಗಿ ಶುಚಿ ಪ್ಯಾಡ್ ದೊರೆಯಲಿ

ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಹಿಳೆಯರು ಒಂದು…

1 hour ago

ಓದುಗರ ಪತ್ರ: ವಿದೇಶಿ ಸಂಗ್ರಹಾಲಯದಿಂದ ನಾಡಿನ ಶಿಲ್ಪಗಳನ್ನು ಹಿಂಪಡೆಯಿರಿ

ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್),…

1 hour ago

ಓದುಗರ ಪತ್ರ: ಬದನವಾಳು ಗ್ರಾಮ ಸ್ವರಾಜ್ಯದ ಕನಸನ್ನು ನೆನಪಿಸಿದ ಆಂದೋಲನ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಪುಟ್ಟ ಗ್ರಾಮ ಬದನವಾಳುಗೆ ೧೯೨೭ಹಾಗೂ ೧೯೩೪ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಕೈಮಗ್ಗ…

1 hour ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ಬ್ಯಾಂಕ್ ಠೇವಣಿಗಳಿಗಿಂತ ವೇಗವಾಗಿ ಸಾಲಗಳು ಬೆಳೆಯುತ್ತಿವೆ

ಪ್ರೊ.ಆರ್.ಎಂ.ಚಿಂತಾಮಣಿ ೨೦೨೫-೨೬ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದ ಕೊನೆಯ ವೇಳೆಗೆ (ಡಿಸೆಂಬರ್೨೦೨೫) ದೇಶದಲ್ಲಿ ಉಪಭೋಗ (Consumption) ಮುಂದಾಗಿರುವ ಆರ್ಥಿಕ ಚಟುವಟಿಕೆಗಳು…

1 hour ago

ರಾಜ್ಯದ ಇತಿಹಾಸದ ಪುಟಗಳಲ್ಲಿ ಮೈಸೂರಿನ ದಾಖಲೆ

ಕೆ.ಬಿ.ರಮೇಶನಾಯಕ ದೇಶದಲ್ಲೇ ಹಲವು ಏಳು-ಬೀಳುಗಳು, ಸ್ಥಿತ್ಯಂತರವನ್ನು ಕಂಡ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯು ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ. ಮುಖ್ಯಮಂತ್ರಿಯಾಗಿ…

2 hours ago