ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಮುಂದುವರಿದಿದ್ದು, ಇಂದು ಮುಡಾ ಮಾಜಿ ಆಯುಕ್ತ ಕಾಂತರಾಜು ವಿಚಾರಣೆಗೆ ಹಾಜರಾಗಿದ್ದರು.
ಮುಡಾದ ಮಾಜಿ ಆಯುಕ್ತ ಕಾಂತರಾಜುರನ್ನು ಲೋಕಾಯುಕ್ತ ಎಸ್ಪಿ ಉದೇಶ್ ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂತರಾಜು, ನನ್ನ ಅವಧಿಯ ಮುಡಾ ವ್ಯವಹಾರಗಳ ಬಗ್ಗೆ ಇಂದು ವಿಚಾರಣೆ ನಡೆಸಲು ಕರೆದಿದ್ದರು. ಕಳೆದ 2017ರಲ್ಲಿ ನಾನು ಮುಡಾ ಆಯುಕ್ತನಾಗಿದ್ದೆ. ಆಗ ಸಿದ್ದರಾಮಯ್ಯರ ಪತ್ನಿ ಪಾರ್ವತಿಯವರು ಪಡೆದಿದ್ದ ಭೂಮಿ ಪರಿಹಾರದ ಬಗ್ಗೆ ವಿಚಾರಣೆ ನಡೆದಿದೆ ಎಂದು ಮಾಹಿತಿ ನೀಡಿದರು.
ಇನ್ನು 2017ರಲ್ಲಿ ಪ್ರಾಧಿಕಾರದ ಸಭೆಯಲ್ಲಿ ಅಭಿವೃದ್ಧಿ ಪಡಿಸದ ಭೂಮಿ ಕೊಡಲು ತೀರ್ಮಾನ ಮಾಡಿದ್ದೆವು. ಇದೆಲ್ಲದರ ಬಗ್ಗೆ ವಿಚಾರಣೆ ನಡೆಸಿದ್ದಾರೆ. ತನಿಖೆ ಪ್ರಗತಿಯಲ್ಲಿ ಇರುವುದರಿಂದ ಯಾವುದನ್ನೂ ಹೆಚ್ಚಿಗೆ ಹೇಳಲು ಆಗುವುದಿಲ್ಲ. ಅಧಿಕಾರಿಯಾಗಿ ನನಗೂ ಕೂಡ ಕೆಲ ನಿರ್ಬಂಧಗಳಿವೆ ಎಂದರು.
ಇನ್ನು ಮಾಹಿತಿ ಪ್ರಕಾರ ಕಾಂತರಾಜು ಅವರನ್ನು ಎರಡು ಗಂಟೆಗೂ ಹೆಚ್ಚಿನ ಕಾಲ ಲೋಕಾಯುಕ್ತ ಎಸ್ಪಿ ಉದೇಶ್ ಅವರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದ್ದು, ಕೇಳಿದ ಎಲ್ಲಾ ಪ್ರಶ್ನೆಗೂ ಕಾಂತರಾಜು ಉತ್ತರ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…