ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಮುಂದುವರಿದಿದ್ದು, ಇಂದು ಮುಡಾ ಮಾಜಿ ಆಯುಕ್ತ ಕಾಂತರಾಜು ವಿಚಾರಣೆಗೆ ಹಾಜರಾಗಿದ್ದರು.
ಮುಡಾದ ಮಾಜಿ ಆಯುಕ್ತ ಕಾಂತರಾಜುರನ್ನು ಲೋಕಾಯುಕ್ತ ಎಸ್ಪಿ ಉದೇಶ್ ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂತರಾಜು, ನನ್ನ ಅವಧಿಯ ಮುಡಾ ವ್ಯವಹಾರಗಳ ಬಗ್ಗೆ ಇಂದು ವಿಚಾರಣೆ ನಡೆಸಲು ಕರೆದಿದ್ದರು. ಕಳೆದ 2017ರಲ್ಲಿ ನಾನು ಮುಡಾ ಆಯುಕ್ತನಾಗಿದ್ದೆ. ಆಗ ಸಿದ್ದರಾಮಯ್ಯರ ಪತ್ನಿ ಪಾರ್ವತಿಯವರು ಪಡೆದಿದ್ದ ಭೂಮಿ ಪರಿಹಾರದ ಬಗ್ಗೆ ವಿಚಾರಣೆ ನಡೆದಿದೆ ಎಂದು ಮಾಹಿತಿ ನೀಡಿದರು.
ಇನ್ನು 2017ರಲ್ಲಿ ಪ್ರಾಧಿಕಾರದ ಸಭೆಯಲ್ಲಿ ಅಭಿವೃದ್ಧಿ ಪಡಿಸದ ಭೂಮಿ ಕೊಡಲು ತೀರ್ಮಾನ ಮಾಡಿದ್ದೆವು. ಇದೆಲ್ಲದರ ಬಗ್ಗೆ ವಿಚಾರಣೆ ನಡೆಸಿದ್ದಾರೆ. ತನಿಖೆ ಪ್ರಗತಿಯಲ್ಲಿ ಇರುವುದರಿಂದ ಯಾವುದನ್ನೂ ಹೆಚ್ಚಿಗೆ ಹೇಳಲು ಆಗುವುದಿಲ್ಲ. ಅಧಿಕಾರಿಯಾಗಿ ನನಗೂ ಕೂಡ ಕೆಲ ನಿರ್ಬಂಧಗಳಿವೆ ಎಂದರು.
ಇನ್ನು ಮಾಹಿತಿ ಪ್ರಕಾರ ಕಾಂತರಾಜು ಅವರನ್ನು ಎರಡು ಗಂಟೆಗೂ ಹೆಚ್ಚಿನ ಕಾಲ ಲೋಕಾಯುಕ್ತ ಎಸ್ಪಿ ಉದೇಶ್ ಅವರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದ್ದು, ಕೇಳಿದ ಎಲ್ಲಾ ಪ್ರಶ್ನೆಗೂ ಕಾಂತರಾಜು ಉತ್ತರ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…