ಮೈಸೂರು ನಗರ

ಮುಡಾ ಅಧ್ಯಕ್ಷ ಕೆ.ಮರಿಗೌಡ ಓರ್ವ ಬಕ್ರಾ ಎಂದ ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಮುಡಾ ಅಧ್ಯಕ್ಷ ಕೆ.ಮರಿಗೌಡ ಓರ್ವ ಬಕ್ರಾ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಮುಡಾ ನಿವೇಶನ ದಂಡ ತಪ್ಪಿಸಲು ಪ್ರತಾಪ್‌ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆ ಎಂದು ಮುಡಾ ಅಧ್ಯಕ್ಷ ಕೆ.ಮರಿಗೌಡ ಗಂಭೀರ ಆರೋಪ ಮಾಡಿದ್ದರು.

ಈ ಬಗ್ಗೆ ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು, ಸಿದ್ದರಾಮಯ್ಯನವರಿಗೆ ಸೈಟ್‌ ವಾಪಸ್‌ ಕೊಡಿ ಅಂತಾ ಹೇಳಿದ್ದೆ. ಕಾಳಜಿ, ಪ್ರೀತಿ, ಗೌರವದಿಂದ ಸಲಹೆ ಕೊಟ್ಟಿದ್ದೆ. ಸಿಎಂ ಸಿದ್ದರಾಮಯ್ಯ ಕೂಡ ಅದನ್ನು ಅರ್ಥ ಮಾಡಿಕೊಳ್ಳಲಿಲ್ಲ. ಮರಿಗೌಡನಂತಹ ಬಕ್ರಾಗಳನ್ನು ಜೊತೆಗಿಟ್ಟುಕೊಂಡಿದ್ದಾರೆ. ಕೆ.ಮರಿಗೌಡ ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಶಿಖಾ ಅವರನ್ನು ನಿಂದಿಸಿದ್ದ. ಅಂತಹ ವ್ಯಕ್ತಿಯನ್ನು ಮುಡಾ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಮರಿಗೌಡನಂತಹ ತಿಳಿಗೇಡಿ ಬಗ್ಗೆ ನಾನು ಏನೂ ಹೇಳೋದಿಲ್ಲ ಎಂದು ಲೇವಡಿ ಮಾಡಿದರು.

ಇನ್ನೂ ಮುಂದುವರಿದು ಮಾತನಾಡಿದ ಪ್ರತಾಪ್‌ ಸಿಂಹ ಅವರು, ಸಿಎಂ ಸಿದ್ದರಾಮಯ್ಯರಿಗೆ ಸಲಹೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರೇ ನಿಮಗೆ ಬಂದಿರುವ ನಿವೇಶನವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಾಪಸ್‌ ಕೊಟ್ಟು ತನಿಖೆ ಮಾಡಿಸಿ ಎಂದು ಸಲಹೆ ನೀಡಿದ್ದಾರೆ.

40 ವರ್ಷಗಳಲ್ಲಿ ಕಳಂಕ ಅಂಟಿಸಿಕೊಳ್ಳದಿರುವ ಸಿದ್ದರಾಮಯ್ಯ ಅವರೇ, ಇದ್ಯಾವುದೋ 16 ಸೈಟಿಗೆ ಏಕೆ ಕಳಂಕ ಅಂಟಿಸಿಕೊಳ್ಳುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು. ಮುಡಾ ಹಗರಣ ಕುರಿತು ಸಂತೋಷ್‌ ಹೆಗ್ಡೆ, ಎನ್‌ ಕುಮಾರ್‌ ಅವರಂತಹ ದಕ್ಷ ವ್ಯಕ್ತಿಗಳಿಂದ ನ್ಯಾಯಾಂಗ ತನಿಖೆ ಮಾಡಿಸಿ ಎಂದು ಆಗ್ರಹಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

1 hour ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago