ಮೈಸೂರು ನಗರ

ಮುಡಾದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರು ಯಾವುದೇ ನಿವೇಶನ ಪಡೆದಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌ ಸ್ಪಷ್ಟನೆ

ಮೈಸೂರು: ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್‌ ಪ್ರತಿಕ್ರಿಯೆ ನೀಡಿದ್ದಾರೆ.

ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮುಡಾದಲ್ಲಿ ನಿವೇಶನ ಪಡೆದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆರೋಪ ಮಾಡಿದ್ದಾರೆ. ಈ ಆರೋಪಗಳೆಲ್ಲಾ ಬರೀ ಸುಳ್ಳು. ಮುಡಾದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಯಾವ ನಿವೇಶನವನ್ನೂ ಪಡೆದಿಲ್ಲ. ಅವರು ಸಿಎಂ ಆಗಿದ್ದಾಗಲೂ ಅಧಿಕಾರ, ಪ್ರಭಾವ ಬಳಸಿಕೊಂಡು ನಿವೇಶನ ಪಡೆದಿಲ್ಲ. ನಿವೇಶನ ಪಡೆದು ಜನರಿಗೆ ವಂಚನೆ ಮಾಡಿರುವುದು ಕಾಂಗ್ರೆಸ್‌ ನಾಯಕರು. ಕಾಂಗ್ರೆಸ್‌ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಆರೋಪಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದರು.

ಇನ್ನೂ ಮುಂದುವರಿದು ಮಾತನಾಡಿದ ಸಾ.ರಾ.ಮಹೇಶ್‌ ಅವರು, ಈಗ ಮುಡಾದಲ್ಲಿ ಯಾವುದೇ ಕೆಲಸ ಕಾರ್ಯ ನಡೆಯುತ್ತಿಲ್ಲ. ಇದರಿಂದ ದೂರದ ಊರುಗಳಿಂದ ಮುಡಾಗೆ ಬರುವ ಜನರು ತೊಂದರೆ ಅನುಭವಿಸುವಂತಾಗಿದೆ. ಯಾರೋ ಮಾಡಿದ ತಪ್ಪಿಗೆ ಮತ್ಯಾರೋ ತೊಂದರೆ ಪಡುವಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮುಡಾ ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ತಕ್ಕ ಶಿಕ್ಷೆಯಾಗಲೇಬೇಕು. ತಪ್ಪಿತಸ್ಥರನ್ನು ಸುಮ್ಮನೆ ಬಿಡಬಾರದು ಎಂದು ಆಗ್ರಹಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇನ್ನೊಂದು ವಾರದೊಳಗೆ ಸಿಎಂ ನಿವಾಸ ಖಾಲಿ ಮಾಡಲಿರುವ ಅರವಿಂದ್‌ ಕೇಜ್ರಿವಾಲ್‌

ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು, ಇನ್ನು ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಲಿದ್ದಾರೆ.…

14 seconds ago

ಶೋಭಾ ಕರಂದ್ಲಾಜೆ ಹಾಗೂ ಆರ್.ಅಶೋಕ್‌ ವಿರುದ್ಧ ಎಫ್‌ಐಆರ್‌

ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.…

4 mins ago

ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಅಸಾದುದ್ದೀನ್ ಓವೈಸಿ ಕಿಡಿ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ…

12 mins ago

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…

16 mins ago

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago