ಮೈಸೂರು: ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮುಡಾದಲ್ಲಿ ನಿವೇಶನ ಪಡೆದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆರೋಪ ಮಾಡಿದ್ದಾರೆ. ಈ ಆರೋಪಗಳೆಲ್ಲಾ ಬರೀ ಸುಳ್ಳು. ಮುಡಾದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಯಾವ ನಿವೇಶನವನ್ನೂ ಪಡೆದಿಲ್ಲ. ಅವರು ಸಿಎಂ ಆಗಿದ್ದಾಗಲೂ ಅಧಿಕಾರ, ಪ್ರಭಾವ ಬಳಸಿಕೊಂಡು ನಿವೇಶನ ಪಡೆದಿಲ್ಲ. ನಿವೇಶನ ಪಡೆದು ಜನರಿಗೆ ವಂಚನೆ ಮಾಡಿರುವುದು ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಆರೋಪಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.
ಇನ್ನೂ ಮುಂದುವರಿದು ಮಾತನಾಡಿದ ಸಾ.ರಾ.ಮಹೇಶ್ ಅವರು, ಈಗ ಮುಡಾದಲ್ಲಿ ಯಾವುದೇ ಕೆಲಸ ಕಾರ್ಯ ನಡೆಯುತ್ತಿಲ್ಲ. ಇದರಿಂದ ದೂರದ ಊರುಗಳಿಂದ ಮುಡಾಗೆ ಬರುವ ಜನರು ತೊಂದರೆ ಅನುಭವಿಸುವಂತಾಗಿದೆ. ಯಾರೋ ಮಾಡಿದ ತಪ್ಪಿಗೆ ಮತ್ಯಾರೋ ತೊಂದರೆ ಪಡುವಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮುಡಾ ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ತಕ್ಕ ಶಿಕ್ಷೆಯಾಗಲೇಬೇಕು. ತಪ್ಪಿತಸ್ಥರನ್ನು ಸುಮ್ಮನೆ ಬಿಡಬಾರದು ಎಂದು ಆಗ್ರಹಿಸಿದರು.
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…