ಮೈಸೂರು: ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮುಡಾದಲ್ಲಿ ನಿವೇಶನ ಪಡೆದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆರೋಪ ಮಾಡಿದ್ದಾರೆ. ಈ ಆರೋಪಗಳೆಲ್ಲಾ ಬರೀ ಸುಳ್ಳು. ಮುಡಾದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಯಾವ ನಿವೇಶನವನ್ನೂ ಪಡೆದಿಲ್ಲ. ಅವರು ಸಿಎಂ ಆಗಿದ್ದಾಗಲೂ ಅಧಿಕಾರ, ಪ್ರಭಾವ ಬಳಸಿಕೊಂಡು ನಿವೇಶನ ಪಡೆದಿಲ್ಲ. ನಿವೇಶನ ಪಡೆದು ಜನರಿಗೆ ವಂಚನೆ ಮಾಡಿರುವುದು ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಆರೋಪಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.
ಇನ್ನೂ ಮುಂದುವರಿದು ಮಾತನಾಡಿದ ಸಾ.ರಾ.ಮಹೇಶ್ ಅವರು, ಈಗ ಮುಡಾದಲ್ಲಿ ಯಾವುದೇ ಕೆಲಸ ಕಾರ್ಯ ನಡೆಯುತ್ತಿಲ್ಲ. ಇದರಿಂದ ದೂರದ ಊರುಗಳಿಂದ ಮುಡಾಗೆ ಬರುವ ಜನರು ತೊಂದರೆ ಅನುಭವಿಸುವಂತಾಗಿದೆ. ಯಾರೋ ಮಾಡಿದ ತಪ್ಪಿಗೆ ಮತ್ಯಾರೋ ತೊಂದರೆ ಪಡುವಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮುಡಾ ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ತಕ್ಕ ಶಿಕ್ಷೆಯಾಗಲೇಬೇಕು. ತಪ್ಪಿತಸ್ಥರನ್ನು ಸುಮ್ಮನೆ ಬಿಡಬಾರದು ಎಂದು ಆಗ್ರಹಿಸಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…