Mysore
22
broken clouds
Light
Dark

ಮೈಸೂರು ಮುಡಾ ವಿಶೇಷ ಭೂಸ್ವಾಧೀನಾಧಿಕಾರಿ ಆರ್.ಮಂಜುನಾಥ್‌ ವರ್ಗ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಆರ್.ಮಂಜುನಾಥ್‌ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಆರ್.ಮಂಜುನಾಥ್‌ ಸೇರಿದಂತೆ ಎಂಟು ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ಬಗ್ಗೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವ ಪ್ರಸಾದ್‌ ಅವರು, ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅಮಾನತು ಬೆನ್ನಲ್ಲೇ ಮುಡಾದ ವಿಶೇಷ ಭೂಸ್ವಾಧೀನಾಧಿಕಾರಿ ಆರ್.ಮಂಜುನಾಥ್‌ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ವೀಣಾ ಆರ್, ಗೀತಾ ಈ ಕೌಲಗಿ, ಮಹೇಶ್‌ ಜಿ, ಮಂಜುನಾಥ್‌ ಆರ್, ಜಗನ್ನಾಥ ರೆಡ್ಡಿ, ಅರುಣ ಕುಮಾರ್‌ ಕುಲಕರ್ಣಿ, ಅನುರಾಧ ವಸ್ತ್ರ, ಮೊಹಮ್ಮದ್‌ ಶಕೀಲ್‌ ಎಂಬುವವರನ್ನು ವರ್ಗಾವಣೆ ಮಾಡಲಾಗಿದೆ.

ಈ ಮೂಲಕ ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಹಲವು ಭ್ರಷ್ಟ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.