ಮೈಸೂರು: ಶಾಸಕ ಶ್ರೀವತ್ಸ ಮುಡಾದಲ್ಲಿ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ಗೆ ಶಾಸಕ ಶ್ರೀವತ್ಸ ತಿರುಗೇಟು ಕೊಟ್ಟಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ನನ್ನ ವಿರುದ್ಧದ ಆರೋಪ ಸಾಬೀತಾದರೇ 24 ಗಂಟೆಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಸೈಟ್ ಬಗ್ಗೆ ಒಂದು ಸಣ್ಣ ದಾಖಲೆ ಬಿಡುಗಡೆ ಮಾಡಿದರೂ ರಾಜಕೀಯ ನಿವೃತ್ತಿ ಹೊಂದುತ್ತೇನೆ. ಒಂದು ವೇಳೆ ನನ್ನ ಮೇಲಿನ ಆರೋಪ ಸುಳ್ಳಾದರೆ ಲಕ್ಷ್ಮಣ್ ರಾಜಕೀಯ ನಿವೃತ್ತಿ ಹೊಂದುತ್ತಾರಾ ಎಂದು ಸವಾಲು ಹಾಕಿದರು.
ಲಕ್ಷ್ಮಣ್ ಅವರು ಮಾತನಾಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು. ಎಲುಬಿಲ್ಲದ ನಾಲಿಗೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಬಾರದು. ನನ್ನ ಹಾಗೂ ನನ್ನ ಕುಟುಂಬದ ಹೆಸರಿನಲ್ಲಿ ಮುಡಾಗೆ ಸಂಬಂಧಿಸಿದ ಒಂದು ತುಂಡು ಜಾಗವೂ ಇಲ್ಲ. ಬೇಷರತ್ ಕ್ಷಮೆಗೆ ನೋಟಿಸ್ ಕಳುಹಿಸಿದ್ದೇವೆ. ಕ್ಷಮೆಯಾಚಿಸದಿದ್ದರೆ ಕಾನೂನು ಸಂಕಷ್ಟ ಎದುರಿಸಬೇಕಾಗುತ್ತದೆ. ಅಷ್ಟು ಸುಲಭವಾಗಿ ಅವರನ್ನು ಬಿಡುವ ಮಾತೇ ಇಲ್ಲ. ಇನ್ನು ಮುಂದೆ ಲಕ್ಷ್ಮಣ್ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದೇ ಇಲ್ಲ. ಏನಿದ್ದರೂ ಕಾನೂನಿನ ಮೂಲಕ ಉತ್ತರ ನೀಡುತ್ತೇನೆ ಎಂದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…