ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧವೇ ನೇರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಿ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ರಾಜ್ಯಪಾಲರಿಗೆ ಸಲಹೆ ನೀಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಡಾ ಹಗರಣ ಗಬ್ಬೆದ್ದು ನಾರುತ್ತಿದೆ. ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧವೇ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಆದರೂ ಕ್ಯಾಬಿನೆಟ್ ಮೀಟಿಂಗ್ ಕರೆದು ಪ್ರಾಸಿಕ್ಯೂಷನ್ ವಿರುದ್ಧ ನಿರ್ಣಯ ಕೈಗೊಂಡಿದ್ದು ಯಾಕೆ ಎಂದು ಪ್ರಶ್ನಿಸಿದರು.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಅಮಾನತ್ತಿನಲ್ಲಿಡಿ ಎಂದು ಆಗ್ರಹಿಸಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ನಡೆಸಬೇಕಿದೆ. ಮುಡಾ ಹಗರಣದ ಬಗ್ಗೆ ಪರ ವಿರೋಧ ಚರ್ಚೆ ಆಗುತ್ತಿದೆ. ರಾಷ್ಟ್ರದಲ್ಲಿ ರಾಜ್ಯದ ಮಾನ ಹರಾಜಾಗುತ್ತಿದೆ. ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನೇ ಕೆಟ್ಟ ಭಾಷೆಯಲ್ಲಿ ಹೀಗಳೆಯುವುದು ಗೌರವ ತರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕೈಕೆಳಗೇ ದಾಖಲೆ ತಿದ್ದುವ ಕೆಲಸ ನಡೆಯುತ್ತಿದೆ. ಸಿಎಂ ಪತ್ನಿಗೆ ಸಂಬಂಧಪಟ್ಟ ದಾಖಲೆಗಳಿಗೆ ವೈಟ್ನರ್ ಹಾಕಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…