ಮೈಸೂರು ನಗರ

ಮುಡಾ ಪ್ರಕರಣ: ಲೋಕಾಯುಕ್ತ ಮೊದಲ ಹಂತದ ತನಿಖೆಯಲ್ಲಿ ಹಲವು ದಾಖಲೆಗಳು ಸೀಜ್

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿ ಮತ್ತು ಎ4 ಆರೋಪಿಯನ್ನು ಮೈಸೂರು ಲೋಕಾಯುಕ್ತ ಮೊದಲ ಹಂತದಲ್ಲಿ ವಿಚಾರಣೆ ನಡೆಸಿದೆ. ಈ ಹಂತದಲ್ಲಿ ಅಧಿಕಾರಿಗಳು 1935 ರಿಂದ 2010ರ ವರೆಗಿನ ಎಲ್ಲಾ ದಾಖಲೆಗಳನ್ನು ಸೀಜ್‌ ಮಾಡಿದ್ದಾರೆ ಎಂದು ಲೋಕಾಯುಕ್ತ ತಿಳಿಸಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರನ್ನು ಸುಮಾರು 10 ಗಂಟೆಗಳ ಕಾಲ ತನಿಖೆ ಸಲುವಾಗಿ ವಿಚಾರಣೆ ನಡೆಸಲಾಯಿತು. ಈ ವಿಚಾರಣೆಯಲ್ಲಿ ಇಬ್ಬರು ಆರೋಪಿಗಳಿಂದ 1935 ರಿಂದ 2010 ರವರೆಗೆ ಎಲ್ಲಾ ವ್ಯವಹಾರದ ಬಗ್ಗೆ ಮಾಹಿತಿ ಪಡೆಯಲಾಯಿತು. ಅಲ್ಲದೇ ಈ ವೇಳೆ ಕೆಸರೆಯಲ್ಲಿನ ಸರ್ವೇ ನಂ.426ರ 3 ಕಾಲು ಎಕರೆ ನಿವೇಶನದ ವಾರಸುದಾರಿಕೆ ಕುರಿತು ವಿಚಾರಣೆಯಲ್ಲಿ ಚರ್ಚಿಸಲಾಯಿತು.

ಈ ಪ್ರಕರಣದ ಬಗ್ಗೆ ವಿಚಾರಣೆಯಲ್ಲಿ ಎ3 ಆರೋಪಿಯಿಂದ ಅನೇಕ ದಾಖಲೆಗಳ ಮಾಹಿತಿಯನ್ನು ಕೆಲಹಾಕಿತ್ತು. ತದನಂತರ ಎ4 ಆರೋಪಿ ದೇವರಾಜು ಅವರು ಲೋಕಾಯುಕ್ತಕ್ಕೆ ಹಲವು ದಾಖಲೆಗಳನ್ನು ಸಲ್ಲಿಸಿದರು ಎಂದು ಹೇಳಿದೆ.

ಮುಡಾ ಪ್ರಕರಣದ ಎರಡನೇ ಹಂತದ ತನಿಖೆ ಅಕ್ಟೋಬರ್‌.14ರಂದು ನಡೆಯಲಿದೆ. ಬಳಿಕ, ಮುಂದಿನ ಹತ್ತು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪಾರ್ವತಿ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಭೇಟಿ ನೀಡಿ ತಾಯಿಯ ದರ್ಶನ…

18 mins ago

ಕೊಡಗು: ಚಟ್ಟಳ್ಳಿ ಕಾಫಿ ತೋಟದಲ್ಲಿ ಹುಲಿ ಸಾವು

ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್‌ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ…

24 mins ago

ನಂಜನಗೂಡಿನಲ್ಲಿ ಮುಂದುವರಿದ ಕಳ್ಳರ ಹಾವಳಿ: ಶಿಕ್ಷಕ ದಂಪತಿ ಮನೆಯಲ್ಲಿ ಕಳ್ಳತನ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ…

29 mins ago

ಓದುಗರ ಪತ್ರ:  ನೀರಿನ ಪೈಪ್ ದುರಸ್ತಿ ಮಾಡಿ

ಮೈಸೂರಿನ ಲಷ್ಕರ್ ಮೊಹಲ್ಲಾದ ವೀರನಗೆರೆ ಮಾರಿಗುಡಿ ಸ್ಥಳದಲ್ಲಿ ಕುಡಿಯುವ ನೀರಿನ ಪೈಪು ಒಡೆದಿದ್ದು, ದುರಸ್ತಿ ಮಾಡಿದರೂ ಕಳಪೆ ಕಾಮಗಾರಿಯಿಂದಾಗಿ ಮತ್ತೆ…

38 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಕ್ರಮ ಅಗತ್ಯ

ಕಳೆದ ೧೫ ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ೧೭ ಲಕ್ಷ ದಷ್ಟು(ಶೇ.೩೦) ಕಡಿಮೆಯಾಗಿರುವುದರ ಬಗ್ಗೆ ವಿಧಾನ…

40 mins ago

ಓದುಗರ ಪತ್ರ:  ಮತದಾರರ ಪಟ್ಟಿ ಮ್ಯಾಪಿಂಗ್; ಅಧಿಕಾರಿಗಳ ನಿರ್ಲಕ್ಷ್ಯ ಸರಿಯಲ್ಲ

ಡಿ.13, 14 ರಂದು ಮೈಸೂರಿನಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಮತದಾರರ ಪಟ್ಟಿಯ ಪರಿಶೀಲನೆಗಾಗಿ…

44 mins ago