ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿ ಮತ್ತು ಎ4 ಆರೋಪಿಯನ್ನು ಮೈಸೂರು ಲೋಕಾಯುಕ್ತ ಮೊದಲ ಹಂತದಲ್ಲಿ ವಿಚಾರಣೆ ನಡೆಸಿದೆ. ಈ ಹಂತದಲ್ಲಿ ಅಧಿಕಾರಿಗಳು 1935 ರಿಂದ 2010ರ ವರೆಗಿನ ಎಲ್ಲಾ ದಾಖಲೆಗಳನ್ನು ಸೀಜ್ ಮಾಡಿದ್ದಾರೆ ಎಂದು ಲೋಕಾಯುಕ್ತ ತಿಳಿಸಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರನ್ನು ಸುಮಾರು 10 ಗಂಟೆಗಳ ಕಾಲ ತನಿಖೆ ಸಲುವಾಗಿ ವಿಚಾರಣೆ ನಡೆಸಲಾಯಿತು. ಈ ವಿಚಾರಣೆಯಲ್ಲಿ ಇಬ್ಬರು ಆರೋಪಿಗಳಿಂದ 1935 ರಿಂದ 2010 ರವರೆಗೆ ಎಲ್ಲಾ ವ್ಯವಹಾರದ ಬಗ್ಗೆ ಮಾಹಿತಿ ಪಡೆಯಲಾಯಿತು. ಅಲ್ಲದೇ ಈ ವೇಳೆ ಕೆಸರೆಯಲ್ಲಿನ ಸರ್ವೇ ನಂ.426ರ 3 ಕಾಲು ಎಕರೆ ನಿವೇಶನದ ವಾರಸುದಾರಿಕೆ ಕುರಿತು ವಿಚಾರಣೆಯಲ್ಲಿ ಚರ್ಚಿಸಲಾಯಿತು.
ಈ ಪ್ರಕರಣದ ಬಗ್ಗೆ ವಿಚಾರಣೆಯಲ್ಲಿ ಎ3 ಆರೋಪಿಯಿಂದ ಅನೇಕ ದಾಖಲೆಗಳ ಮಾಹಿತಿಯನ್ನು ಕೆಲಹಾಕಿತ್ತು. ತದನಂತರ ಎ4 ಆರೋಪಿ ದೇವರಾಜು ಅವರು ಲೋಕಾಯುಕ್ತಕ್ಕೆ ಹಲವು ದಾಖಲೆಗಳನ್ನು ಸಲ್ಲಿಸಿದರು ಎಂದು ಹೇಳಿದೆ.
ಮುಡಾ ಪ್ರಕರಣದ ಎರಡನೇ ಹಂತದ ತನಿಖೆ ಅಕ್ಟೋಬರ್.14ರಂದು ನಡೆಯಲಿದೆ. ಬಳಿಕ, ಮುಂದಿನ ಹತ್ತು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪಾರ್ವತಿ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…
ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್ ಪುಂಡರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…
ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.19ರವರೆಗೆ ಅಧಿವೇಶನ…
ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…
ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…