ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿ ಮತ್ತು ಎ4 ಆರೋಪಿಯನ್ನು ಮೈಸೂರು ಲೋಕಾಯುಕ್ತ ಮೊದಲ ಹಂತದಲ್ಲಿ ವಿಚಾರಣೆ ನಡೆಸಿದೆ. ಈ ಹಂತದಲ್ಲಿ ಅಧಿಕಾರಿಗಳು 1935 ರಿಂದ 2010ರ ವರೆಗಿನ ಎಲ್ಲಾ ದಾಖಲೆಗಳನ್ನು ಸೀಜ್ ಮಾಡಿದ್ದಾರೆ ಎಂದು ಲೋಕಾಯುಕ್ತ ತಿಳಿಸಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರನ್ನು ಸುಮಾರು 10 ಗಂಟೆಗಳ ಕಾಲ ತನಿಖೆ ಸಲುವಾಗಿ ವಿಚಾರಣೆ ನಡೆಸಲಾಯಿತು. ಈ ವಿಚಾರಣೆಯಲ್ಲಿ ಇಬ್ಬರು ಆರೋಪಿಗಳಿಂದ 1935 ರಿಂದ 2010 ರವರೆಗೆ ಎಲ್ಲಾ ವ್ಯವಹಾರದ ಬಗ್ಗೆ ಮಾಹಿತಿ ಪಡೆಯಲಾಯಿತು. ಅಲ್ಲದೇ ಈ ವೇಳೆ ಕೆಸರೆಯಲ್ಲಿನ ಸರ್ವೇ ನಂ.426ರ 3 ಕಾಲು ಎಕರೆ ನಿವೇಶನದ ವಾರಸುದಾರಿಕೆ ಕುರಿತು ವಿಚಾರಣೆಯಲ್ಲಿ ಚರ್ಚಿಸಲಾಯಿತು.
ಈ ಪ್ರಕರಣದ ಬಗ್ಗೆ ವಿಚಾರಣೆಯಲ್ಲಿ ಎ3 ಆರೋಪಿಯಿಂದ ಅನೇಕ ದಾಖಲೆಗಳ ಮಾಹಿತಿಯನ್ನು ಕೆಲಹಾಕಿತ್ತು. ತದನಂತರ ಎ4 ಆರೋಪಿ ದೇವರಾಜು ಅವರು ಲೋಕಾಯುಕ್ತಕ್ಕೆ ಹಲವು ದಾಖಲೆಗಳನ್ನು ಸಲ್ಲಿಸಿದರು ಎಂದು ಹೇಳಿದೆ.
ಮುಡಾ ಪ್ರಕರಣದ ಎರಡನೇ ಹಂತದ ತನಿಖೆ ಅಕ್ಟೋಬರ್.14ರಂದು ನಡೆಯಲಿದೆ. ಬಳಿಕ, ಮುಂದಿನ ಹತ್ತು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪಾರ್ವತಿ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…