ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ತನಿಖೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಈ ಹಿಂದೆ 1095 ಸೈಟ್ಗಳು ಅಕ್ರಮ ನಡೆದಿದೆ ಎನ್ನಲಾಗಿತ್ತು. ಆದರೆ, ತನಿಖೆಗೆ ಮುಂದುವರಿದ ಭಾಗದಲ್ಲಿ ಬರೋಬ್ಬರಿ 4921 ಸೈಟ್ಗಳೇ ಅಕ್ರಮ ಅನ್ನೋದು ಬಯಲಾಗಿದೆ.
50:50 ಅನುಪಾರ ಅಷ್ಟೇ ಅಲ್ಲ. 60:40 ಅನುಪಾತದಲ್ಲಿ ಲೇಔಟ್ಗೆ ಲೇಔಟ್ಗಳಣ್ನೇ ಅಕ್ರಮ ಮಾಡಿದ್ದಾರೆ. ಅದಕ್ಕೆ ಪೂರಕ ದಾಖಲೆ ತಿದ್ದಿದ್ದಾರೆ ಎನ್ನುವುದು ಇ.ಡಿ ತನಿಖೆ ವೇಳೆ ಬಯಲಾಗಿದೆ.
ಇ.ಡಿ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ಸತ್ಯ ಬಯಲಾಗಿದೆ. ಇದು 700 ಕೋಟಿಯ ಅಕ್ರಮ ಅಲ್ಲ. 2800 ಕೋಟಿಯ ಅಕ್ರಮ ಎನ್ನಲಾಗಿದ್ದು, 13 ವರ್ಷದಲ್ಲಿ 4,921ಕ್ಕೂ ಹೆಚ್ಚು ಸೈಟ್ಗಳ ಅಕ್ರಮ ಹಂಚಿಕೆ ಆಗಿದೆ ಎನ್ನಲಾಗುತ್ತಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಆಯುಕ್ತರಿಂದ ಅಕ್ರಮದ ಸರಮಾಲೆ ನಡೆದಿದೆ ಎನ್ನಲಾಗಿದ್ದು, ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ಸೇರಿ ಅಕ್ರಮ ಲೇಔಟ್ಗಳ ನಿರ್ಮಾಣ ನಡೆದಿದೆ ಎನ್ನಲಾಗಿದೆ.
ಈ ಮೂಲಕ ಮುಡಾದಲ್ಲಿ ಭಾರೀ ಗೋಲ್ಮಾಲ್ ನಡೆದಿದೆ ಎನ್ನಲಾಗಿದ್ದು, ತನಿಖೆ ನಡೆಯುತ್ತಿದ್ದಂತೆ ಈ ಅಕ್ರಮಗಳು ಮತ್ತಷ್ಟು ಹೊರಬರುತ್ತಿವೆ. ಹೀಗಾಗಿ ರಾಜ್ಯದಲ್ಲಿ ಮುಡಾ ಸದ್ದು ಮತ್ತಷ್ಟು ಬಿಸಿ ಬಿಸಿ ಚರ್ಚೆಯಾಗುವ ಸಾಧ್ಯತೆಯಿದೆ.
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…
ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…