ಮೈಸೂರು ನಗರ

ಮೈಸೂರು ಮುಡಾದಲ್ಲಿ ಭಾರೀ ಗೋಲ್‌ಮಾಲ್: 13 ವರ್ಷದಲ್ಲಿ ಅಕ್ರಮವಾಗಿರುವ ಸೈಟ್‌ಗಳೆಷ್ಟು ಗೊತ್ತಾ?

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ತನಿಖೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಈ ಹಿಂದೆ 1095 ಸೈಟ್‌ಗಳು ಅಕ್ರಮ ನಡೆದಿದೆ ಎನ್ನಲಾಗಿತ್ತು. ಆದರೆ, ತನಿಖೆಗೆ ಮುಂದುವರಿದ ಭಾಗದಲ್ಲಿ ಬರೋಬ್ಬರಿ 4921 ಸೈಟ್‌ಗಳೇ ಅಕ್ರಮ ಅನ್ನೋದು ಬಯಲಾಗಿದೆ.

50:50 ಅನುಪಾರ ಅಷ್ಟೇ ಅಲ್ಲ. 60:40 ಅನುಪಾತದಲ್ಲಿ ಲೇಔಟ್‌ಗೆ ಲೇಔಟ್‌ಗಳಣ್ನೇ ಅಕ್ರಮ ಮಾಡಿದ್ದಾರೆ. ಅದಕ್ಕೆ ಪೂರಕ ದಾಖಲೆ ತಿದ್ದಿದ್ದಾರೆ ಎನ್ನುವುದು ಇ.ಡಿ ತನಿಖೆ ವೇಳೆ ಬಯಲಾಗಿದೆ.

ಇ.ಡಿ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ಸತ್ಯ ಬಯಲಾಗಿದೆ. ಇದು 700 ಕೋಟಿಯ ಅಕ್ರಮ ಅಲ್ಲ. 2800 ಕೋಟಿಯ ಅಕ್ರಮ ಎನ್ನಲಾಗಿದ್ದು, 13 ವರ್ಷದಲ್ಲಿ 4,921ಕ್ಕೂ ಹೆಚ್ಚು ಸೈಟ್‌ಗಳ ಅಕ್ರಮ ಹಂಚಿಕೆ ಆಗಿದೆ ಎನ್ನಲಾಗುತ್ತಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಆಯುಕ್ತರಿಂದ ಅಕ್ರಮದ ಸರಮಾಲೆ ನಡೆದಿದೆ ಎನ್ನಲಾಗಿದ್ದು, ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಜೊತೆ ಸೇರಿ ಅಕ್ರಮ ಲೇಔಟ್‌ಗಳ ನಿರ್ಮಾಣ ನಡೆದಿದೆ ಎನ್ನಲಾಗಿದೆ.

ಈ ಮೂಲಕ ಮುಡಾದಲ್ಲಿ ಭಾರೀ ಗೋಲ್‌ಮಾಲ್‌ ನಡೆದಿದೆ ಎನ್ನಲಾಗಿದ್ದು, ತನಿಖೆ ನಡೆಯುತ್ತಿದ್ದಂತೆ ಈ ಅಕ್ರಮಗಳು ಮತ್ತಷ್ಟು ಹೊರಬರುತ್ತಿವೆ. ಹೀಗಾಗಿ ರಾಜ್ಯದಲ್ಲಿ ಮುಡಾ ಸದ್ದು ಮತ್ತಷ್ಟು ಬಿಸಿ ಬಿಸಿ ಚರ್ಚೆಯಾಗುವ ಸಾಧ್ಯತೆಯಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

1 hour ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

1 hour ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

4 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

4 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

5 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

5 hours ago