ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಲೋಕಾಯುಕ್ತ ಎಸ್ಪಿ, ಪ್ರಕರಣದ ತನಿಖೆ ನಡೆಸಲು ನಾಲ್ಕು ತಂಡ ರಚನೆ ಮಾಡಿದೆ.
ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಎ1 ಆರೋಪಿಯಾಗಿದ್ದು, ಸಿಎಂಗೆ ತನಿಖೆಯ ಟೆನ್ಷನ್ ಶುರುವಾಗಿದೆ.
ಇಂದು ಮತ್ತು ನಾಳೆ ಲೋಕಾಯುಕ್ತ ಕಚೇರಿಗೆ ರಜೆ ಇದ್ದು, ಸೋಮವಾರದಿಂದ ಅಧಿಕೃತ ತನಿಖೆ ಶುರುವಾಗಲಿದೆ.
ಮೂರು ತಿಂಗಳ ಒಳಗಾಗಿ ಕೋರ್ಟ್ಗೆ ತನಿಖಾ ವರದಿ ಸಲ್ಲಿಸಬೇಕಾಗಿರುವುದರಿಂದ ತನಿಖೆ ಚುರುಕಾಗಿಯೇ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಸೋಮವಾರದಿಂದ ಮುಡಾ ಅಸಲಿ ಆಟ ಶುರುವಾಗಲಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ಆರಂಭಿಸಲು ಬಿಗ್ ಪ್ಲಾನ್ ರೂಪಿಸಿದ್ದು, ಕಾನೂನು ಸಲಹೆಗಾರರ ಜೊತೆ ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…