ಮೈಸೂರು: ನೋಟಿಸ್ ಇಲ್ಲದೆಯೇ ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರು ರಾತ್ರೋರಾತ್ರಿ ಲೋಕಾಯುಕ್ತ ಎಸ್ಪಿ ಕಚೇರಿಗೆ ಭೇಟಿ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ನಿನ್ನೆ ಮುಡಾದ ಹಿಂದಿನ ಆಯುಕ್ತ ನಟೇಶ್ ಅವರು ಲೋಕಾಯುಕ್ತ ಎಸ್ಪಿ ಕಚೇರಿಗೆ ವಿಚಾರಣೆಗೆಂದು ಹಾಜರಾಗಿದ್ದರು.
ನಟೇಶ್ ವಿಚಾರಣೆ ಮುಗಿದ ಅರ್ಧಗಂಟೆಯ ಬಳಿಕ ಮಲ್ಲಿಕಾರ್ಜುಸ್ವಾಮಿ ಅವರು ಲೋಕಾಯುಕ್ತ ಎಸ್ಪಿ ಉದೇಶ್ರನ್ನು ಭೇಟಿಯಾಗಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನಸ್ವಾಮಿ ಮೂರನೇ ಆರೋಪಿಯಾಗಿದ್ದು, ರಾತ್ರೋರಾತ್ರಿ ಕಚೇರಿಗೆ ಭೇಟಿ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಈ ಬೆಳವಣಿಗೆಗಳ ಮಧ್ಯೆ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡಿದ್ದು, ರಾತ್ರೋರಾತ್ರಿ ತನಿಖಾಧಿಕಾರಿ ಭೇಟಿ ಮಾಡುವ ಅನಿವಾರ್ಯತೆ ಏನಿತ್ತು? ಒಬ್ಬರನ್ನು ವಿಚಾರಣೆ ಮಾಡಿದ ಬಳಿಕ ವಿಚಾರಣಾಧಿಕಾರಿಯನ್ನು ಆರೋಪಿ ಭೇಟಿ ಮಾಡಿದ್ದು ಯಾಕೆ? ರಾತ್ರಿ ವೇಳೆ ಆರೋಪಿಗೆ ಲೋಕಾಯುಕ್ತ ಕಚೇರಿಗೆ ಬರಲು ಅವಕಾಶ ಕೊಟ್ಟಿದ್ದು ಯಾರು ಎಂದು ಪ್ರಶ್ನೆ ಮಾಡುತ್ತಿದ್ದಾರೆ.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…