Mysore
25
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿದ್ದರಾಮಯ್ಯ ಮೆತ್ತಗೆ ಆಗಿದ್ದಾರೆ: ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.

ಈ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ ಸಿದ್ದರಾಮಯ್ಯ ಮೆತ್ತಗೆ ಆಗಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಮುಡಾ ಹಗರಣದ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಆಗುತ್ತದೆ. ಸದ್ಯಕ್ಕೆ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲಾಗುತ್ತಿದೆ. ಶುಕ್ರವಾರ ಅಥವಾ ಮುಂದಿನ ಸೋಮವಾರ ಮುಡಾ ಹಗರಣದ ಬಗ್ಗೆ ಮಾತನಾಡುತ್ತೇವೆ. ಮುಡಾ ಹಗರಣಕ್ಕೆ ತಾರ್ಕಿಕ ಅಂತ್ಯ ಸಿಗಲಿದೆ ಎಂದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಮುಡಾ ಪ್ರಕರಣದ ಬಗ್ಗೆ ಎಲ್ಲಾ ಬೆಳವಣಿಗೆಗಳನ್ನು ನೋಡಿದ್ರೆ ಪ್ರಕರಣವನ್ನು ಮುಂದೂಡುವ ತಂತ್ರ ಅಡಗಿದೆ. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಆ ಎಲ್ಲಾ ದಾಖಲೆಗಳನ್ನು ಬಹಿರಂಗ ಪಡಿಸುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.

 

Tags:
error: Content is protected !!