ಮೈಸೂರು ನಗರ

ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿದ್ದರಾಮಯ್ಯ ಮೆತ್ತಗೆ ಆಗಿದ್ದಾರೆ: ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.

ಈ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ ಸಿದ್ದರಾಮಯ್ಯ ಮೆತ್ತಗೆ ಆಗಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಮುಡಾ ಹಗರಣದ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಆಗುತ್ತದೆ. ಸದ್ಯಕ್ಕೆ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲಾಗುತ್ತಿದೆ. ಶುಕ್ರವಾರ ಅಥವಾ ಮುಂದಿನ ಸೋಮವಾರ ಮುಡಾ ಹಗರಣದ ಬಗ್ಗೆ ಮಾತನಾಡುತ್ತೇವೆ. ಮುಡಾ ಹಗರಣಕ್ಕೆ ತಾರ್ಕಿಕ ಅಂತ್ಯ ಸಿಗಲಿದೆ ಎಂದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಮುಡಾ ಪ್ರಕರಣದ ಬಗ್ಗೆ ಎಲ್ಲಾ ಬೆಳವಣಿಗೆಗಳನ್ನು ನೋಡಿದ್ರೆ ಪ್ರಕರಣವನ್ನು ಮುಂದೂಡುವ ತಂತ್ರ ಅಡಗಿದೆ. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಆ ಎಲ್ಲಾ ದಾಖಲೆಗಳನ್ನು ಬಹಿರಂಗ ಪಡಿಸುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ಸಾವಿನ ನಂತರವೂ ಜನಮಾನಸದಲ್ಲಿ ಉಳಿದ ವೀರಭದ್ರಪ್ಪ’

ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ  ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…

34 mins ago

ಓದುಗರ ಪತ್ರ: ಮಹಿಳೆ ವಿವಸ ಪ್ರಕರಣ ತನಿಖೆಯಲ್ಲಿ ಪೂರ್ವಗ್ರಹ ಬೇಡ

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…

42 mins ago

ಓದುಗರ ಪತ್ರ: ಶಾಲೆ ಬಳಿಯೇ ಕಸದ ಗುಡ್ಡೆ!

ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…

44 mins ago

ಓದುಗರ ಪತ್ರ: ಬಹುರೂಪಿ ಬಾಬಾಸಾಹೇಬ್… ಅರ್ಥಪೂರ್ಣ ಆಶಯ

ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ…

46 mins ago

ದೊಡ್ಡ ಹೆಜ್ಜೂರು ಆಂಜನೇಯಸ್ವಾಮಿ ರಥೋತ್ಸವಕ್ಕೆ ಸಿದ್ಧತೆ

ದಾ.ರಾ.ಮಹೇಶ್ ಜ.೧೫ರಿಂದ ೧೮ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು; ಗಿರಿಜನರು ಹೆಚ್ಚಾಗಿ ಭಾಗಿಯಾಗುವ ಜಾತ್ರೆ ವೀರನಹೊಸಹಳ್ಳಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ…

50 mins ago

ಜನವರಿ.21ರಿಂದ ಮುಡುಕುತೊರೆ ಜಾತ್ರಾ ಮಹೋತ್ಸವ ಸಂಭ್ರಮ

ಎಂ.ನಾರಾಯಣ ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಈ ಬಾರಿಯೂ ರಥೋತ್ಸವ ಇಲ್ಲ  ತಿ.ನರಸೀಪುರ: ಕಾವೇರಿ ನದಿ ದಡದಲ್ಲಿರುವ ತಾಲ್ಲೂಕಿನ ಪ್ರಸಿದ್ಧ ಪುಣ್ಯ…

56 mins ago